ಓದುಗರ ಪತ್ರ
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್ ಹಾಗೂ ಸಂಬಂಧಪಟ್ಟವರ ಗಮನಕ್ಕೆ ತಂದಿದ್ದರೂ ಈವರೆಗೂ ಸಮಸ್ಯೆ ಬಗೆಹರಿಸುವಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಪರಿಣಾಮ ಬೀರುತ್ತಿದೆ. ವಿದ್ಯಾರ್ಥಿ ನಿಲಯದ ಕಿಟಕಿ ಗ್ಲಾಸ್ ಒಡೆದು ಹೋಗಿವೆ. ಬಾಗಿಲುಗಳು ಹಾಳಾಗಿವೆ. ಅಲ್ಲದೇ ಕೊಠಡಿಗಳಲ್ಲಿ ಫ್ಯಾನ್ಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕಂಪ್ಯೂಟರ್ ವ್ಯವಸ್ಥೆಯಿಲ್ಲ. ಹಾಗೂ ವೈಫೈ ಸೌಲಭ್ಯವು ಇಲ್ಲ.
ಈ ಹಿಂದೆ ಹಲವು ಸೌಲಭ್ಯಗಳನ್ನು ನೀಡಲಾಗಿದ್ದು, ಕೆಲವು ವರ್ಷಗಳಿಂದ ಈ ಯಾವುದೇ ವ್ಯವಸ್ಥೆಗಳು ಸಮರ್ಪಕವಾಗಿಲ್ಲ. ನಿಲಯದ ಸುತ್ತಲು ಕಸದ ರಾಶಿಯಿದ್ದು , ತೆರವುಗೊಳಿಸಿಲ್ಲ. ಅಲ್ಲದೆ ರಾತ್ರಿ ವೇಳೆಯಲ್ಲಿ ನಿಲಯಕ್ಕೆ ಓಡಾಡಲು ಸರಿಯಾದ ರಸ್ತೆ ವ್ಯವಸ್ಥೆ ಹಾಗೂ ಬೀದಿ ದೀಪದ ವ್ಯವಸ್ಥೆಗಳು ಇಲ್ಲವಾದ್ದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗಿದೆ. ಸಂಬಂಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳು ಕೂಡಲೇ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಎಂ.ಎಚ್.ಮುಂತಾಹಿರ್, ದ್ವಿತೀಯ ಎಂ.ಎ., ಪತ್ರಿಕೋದ್ಯಮ ಮೈಸೂರು ವಿಶ್ವವಿದ್ಯಾನಿಲಯ
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…