ಮೈಸೂರು ತಾಲ್ಲೂಕಿನ ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೆಂಚಲಗೂಡು ಗ್ರಾಮದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ)ಯಿಂದ ನಿರ್ಮಿಸಿರುವ ಬಡಾವಣೆಯಲ್ಲಿ ನೀರು, ರಸ್ತೆ ಮೊದಲಾದ ಮೂಲ ಸೌಕರ್ಯಗಳಿಲ್ಲದೇ ಇಲ್ಲಿನ ನಿವಾಸಿಗಳಿಗೆ ತೀವ್ರ ತೊಂದರೆಯಾಗಿದೆ.
ಇಲ್ಲಿ ೮೦ಕ್ಕೂ ಹೆಚ್ಚು ಮನೆಗಳಿದ್ದು, ಬಡಾವಣೆ ನಿರ್ಮಾಣವಾದ ನಂತರ ಕೆಹೆಚ್ಬಿಯವರು ಧನಗಳ್ಳಿ ಗ್ರಾಪಂಗೆ ಹಸ್ತಾಂತರಿಸಿದ್ದು, ಗ್ರಾಮ ಪಂಚಾಯಿತಿಯವರು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಲ್ಲ. ರಸ್ತೆ ಯ ಮೇಲೆ ಆಳೆತ್ತರದ ಗಿಡಗಳು ಬೆಳೆದಿದ್ದು, ವಿಷಜಂತುಗಳ ಆವಾಸ ಸ್ಥಾನವಾಗಿದ್ದು, ಜನರು ರಾತ್ರಿಯ ವೇಳೆ ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಚರಂಡಿಗಳು ಹೂಳು ತುಂಬಿದ್ದು, ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದೆ. ರಸ್ತೆಯ ಮೇಲೆ ಬೆಳೆದಿರುವ ಗಿಡಗಳನ್ನು ತೆರವುಗೊಳಿಸಬೇಕು, ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಗ್ರಾಮ ಪಂಚಾಯಿತಿ ಹಾಗೂ ಕರ್ನಾಟಕ ಗೃಹ ಮಂಡಳಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ಸಂಬಂಧಪಟ್ಟವರು ಕೂಡಲೇ ರಸ್ತೆಯ ಮೇಲೆ ಬೆಳದಿರುವ ಗಿಡಗಳನ್ನು ತೆರವುಗೊಳಿಸಬೇಕು, ಕುಡಿಯುವ ನೀರು ಮೊದಲಾದ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಕೆ.ಪಿ.ನಂಜುಂಡಸ್ವಾಮಿ, ಕೆಹೆಚ್ಬಿ ಬಡಾವಣೆ, ಕೆಂಚಲಗೂಡು ಮೈಸೂರು ತಾ
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…