Andolana originals

ಓದುಗರ ಪತ್ರ: ಕೆಎಚ್‌ಬಿ ಬಡಾವಣೆಗೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರು ತಾಲ್ಲೂಕಿನ ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೆಂಚಲಗೂಡು ಗ್ರಾಮದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ)ಯಿಂದ ನಿರ್ಮಿಸಿರುವ ಬಡಾವಣೆಯಲ್ಲಿ ನೀರು, ರಸ್ತೆ ಮೊದಲಾದ ಮೂಲ ಸೌಕರ್ಯಗಳಿಲ್ಲದೇ ಇಲ್ಲಿನ ನಿವಾಸಿಗಳಿಗೆ ತೀವ್ರ ತೊಂದರೆಯಾಗಿದೆ.

ಇಲ್ಲಿ ೮೦ಕ್ಕೂ ಹೆಚ್ಚು ಮನೆಗಳಿದ್ದು, ಬಡಾವಣೆ ನಿರ್ಮಾಣವಾದ ನಂತರ ಕೆಹೆಚ್‌ಬಿಯವರು ಧನಗಳ್ಳಿ ಗ್ರಾಪಂಗೆ ಹಸ್ತಾಂತರಿಸಿದ್ದು, ಗ್ರಾಮ ಪಂಚಾಯಿತಿಯವರು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಲ್ಲ. ರಸ್ತೆ ಯ ಮೇಲೆ ಆಳೆತ್ತರದ ಗಿಡಗಳು ಬೆಳೆದಿದ್ದು, ವಿಷಜಂತುಗಳ ಆವಾಸ ಸ್ಥಾನವಾಗಿದ್ದು, ಜನರು ರಾತ್ರಿಯ ವೇಳೆ ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಚರಂಡಿಗಳು ಹೂಳು ತುಂಬಿದ್ದು, ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದೆ. ರಸ್ತೆಯ ಮೇಲೆ ಬೆಳೆದಿರುವ ಗಿಡಗಳನ್ನು ತೆರವುಗೊಳಿಸಬೇಕು, ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಗ್ರಾಮ ಪಂಚಾಯಿತಿ ಹಾಗೂ ಕರ್ನಾಟಕ ಗೃಹ ಮಂಡಳಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಸಂಬಂಧಪಟ್ಟವರು ಕೂಡಲೇ ರಸ್ತೆಯ ಮೇಲೆ ಬೆಳದಿರುವ ಗಿಡಗಳನ್ನು ತೆರವುಗೊಳಿಸಬೇಕು, ಕುಡಿಯುವ ನೀರು ಮೊದಲಾದ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.

– ಕೆ.ಪಿ.ನಂಜುಂಡಸ್ವಾಮಿ, ಕೆಹೆಚ್‌ಬಿ ಬಡಾವಣೆ, ಕೆಂಚಲಗೂಡು ಮೈಸೂರು ತಾ

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago