Andolana originals

ಓದುಗರ ಪತ್ರ: ಕೆಎಚ್‌ಬಿ ಬಡಾವಣೆಗೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರು ತಾಲ್ಲೂಕಿನ ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೆಂಚಲಗೂಡು ಗ್ರಾಮದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ)ಯಿಂದ ನಿರ್ಮಿಸಿರುವ ಬಡಾವಣೆಯಲ್ಲಿ ನೀರು, ರಸ್ತೆ ಮೊದಲಾದ ಮೂಲ ಸೌಕರ್ಯಗಳಿಲ್ಲದೇ ಇಲ್ಲಿನ ನಿವಾಸಿಗಳಿಗೆ ತೀವ್ರ ತೊಂದರೆಯಾಗಿದೆ.

ಇಲ್ಲಿ ೮೦ಕ್ಕೂ ಹೆಚ್ಚು ಮನೆಗಳಿದ್ದು, ಬಡಾವಣೆ ನಿರ್ಮಾಣವಾದ ನಂತರ ಕೆಹೆಚ್‌ಬಿಯವರು ಧನಗಳ್ಳಿ ಗ್ರಾಪಂಗೆ ಹಸ್ತಾಂತರಿಸಿದ್ದು, ಗ್ರಾಮ ಪಂಚಾಯಿತಿಯವರು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಲ್ಲ. ರಸ್ತೆ ಯ ಮೇಲೆ ಆಳೆತ್ತರದ ಗಿಡಗಳು ಬೆಳೆದಿದ್ದು, ವಿಷಜಂತುಗಳ ಆವಾಸ ಸ್ಥಾನವಾಗಿದ್ದು, ಜನರು ರಾತ್ರಿಯ ವೇಳೆ ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಚರಂಡಿಗಳು ಹೂಳು ತುಂಬಿದ್ದು, ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದೆ. ರಸ್ತೆಯ ಮೇಲೆ ಬೆಳೆದಿರುವ ಗಿಡಗಳನ್ನು ತೆರವುಗೊಳಿಸಬೇಕು, ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಗ್ರಾಮ ಪಂಚಾಯಿತಿ ಹಾಗೂ ಕರ್ನಾಟಕ ಗೃಹ ಮಂಡಳಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಸಂಬಂಧಪಟ್ಟವರು ಕೂಡಲೇ ರಸ್ತೆಯ ಮೇಲೆ ಬೆಳದಿರುವ ಗಿಡಗಳನ್ನು ತೆರವುಗೊಳಿಸಬೇಕು, ಕುಡಿಯುವ ನೀರು ಮೊದಲಾದ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.

– ಕೆ.ಪಿ.ನಂಜುಂಡಸ್ವಾಮಿ, ಕೆಹೆಚ್‌ಬಿ ಬಡಾವಣೆ, ಕೆಂಚಲಗೂಡು ಮೈಸೂರು ತಾ

 

ಆಂದೋಲನ ಡೆಸ್ಕ್

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

4 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

5 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

7 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

8 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

10 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

11 hours ago