ಓದುಗರ ಪತ್ರ
ಎಚ್.ಡಿ.ಕೋಟೆಯಿಂದ ಮೈಸೂರು ಕಡೆಗೆ ಹಾಗೂ ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗವಾಗಿ ಸಂಚರಿಸುವ ಸಾರಿಗೆ ನಿಗಮದ ಬಸ್ ಗಳು ಹೈರಿಗೆ, ಮಾದಾಪುರ ಗ್ರಾಮಗಳಲ್ಲಿ ನಿಲುಗಡೆ ಮಾಡುವುದಿಲ್ಲ. ಈ ಎರಡೂ ಗ್ರಾಮಗಳು ಸಾಕಷ್ಟು ಜನಸಂಖ್ಯೆಯನ್ನು ಹೊಂದಿವೆ. ಗ್ರಾಮಸ್ಥರು, ವಿದ್ಯಾರ್ಥಿಗಳು ಬಸ್ ನಿರ್ವಾಹಕರು ಅಥವಾ ಚಾಲಕರನ್ನು ಕೇಳಿದರೆ ಇದು ‘ನಾನ್ ಸ್ಟಾಪ್’ ಬಸ್ ಎಂದು ಹೇಳುತ್ತಾರೆ. ಗಡಸು ಧ್ವನಿಯಿಂದ ಗದರಿ ಉತ್ತರ ನೀಡುತ್ತಾರೆ.
‘ಮಾದಾಪುರ ಹಾಗೂ ಹೈರಿಗೆ ಗ್ರಾಮಗಳಿಗೆ ದಿನನಿತ್ಯ ಅಕ್ಕಪಕ್ಕದ ಊರುಗಳಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಮಾತ್ರವಲ್ಲದೆ, ಸರ್ಕಾರಿ ನೌಕರರು ಮೈಸೂರು ಮತ್ತು ಎಚ್.ಡಿ.ಕೋಟೆಯಿಂದ ಬಂದು ಹೋಗುತ್ತಾರೆ. ಶಿಕ್ಷಕರು,ಉಪನ್ಯಾಸಕರಿಗೂ ಇದರಿಂದ ಬಹಳ ತೊಂದರೆಯಾಗಿದೆ. ವಿದ್ಯಾರ್ಥಿಗಳು ತರಗತಿಗೆ ಹಾಜರಾಗುವಲ್ಲಿ ವಿಳಂಬವಾಗುತ್ತಿದೆ. ಚಿಕಿತ್ಸೆಗಾಗಿ ಮೈಸೂರು ಅಥವಾ ಎಚ್.ಡಿ.ಕೋಟೆ ಕಡೆಗೆ ತೆರಳಬೇಕಾದ ರೋಗಿಗಳು ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ಸಾರಿಗೆ ನಿಗಮದ ಅಧಿಕಾರಿಗಳು, ಜನಪ್ರತಿನಿಧಿಗಳು ಈ ಎರಡೂ ಗ್ರಾಮಗಳಲ್ಲಿ ಬಸ್ ನಿಲುಗಡೆಗೆ ಅವಕಾಶ ಮಾಡಿಕೊಟ್ಟು ಜನರಿಗೆ ಅನುಕೂಲ ಕಲ್ಪಿಸಲಿ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ. ತಾಲ್ಲೂಕು.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…