Andolana originals

ಓದುಗರ ಪತ್ರ: ಹೈರಿಗೆ, ಮಾದಾಪುರದಲ್ಲಿ ಬಸ್‌ ನಿಲುಗಡೆ ಕಲ್ಪಿಸಿ

ಎಚ್.ಡಿ.ಕೋಟೆಯಿಂದ ಮೈಸೂರು ಕಡೆಗೆ ಹಾಗೂ ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗವಾಗಿ ಸಂಚರಿಸುವ ಸಾರಿಗೆ ನಿಗಮದ ಬಸ್ ಗಳು ಹೈರಿಗೆ, ಮಾದಾಪುರ ಗ್ರಾಮಗಳಲ್ಲಿ ನಿಲುಗಡೆ ಮಾಡುವುದಿಲ್ಲ. ಈ ಎರಡೂ ಗ್ರಾಮಗಳು ಸಾಕಷ್ಟು ಜನಸಂಖ್ಯೆಯನ್ನು ಹೊಂದಿವೆ. ಗ್ರಾಮಸ್ಥರು, ವಿದ್ಯಾರ್ಥಿಗಳು ಬಸ್ ನಿರ್ವಾಹಕರು ಅಥವಾ ಚಾಲಕರನ್ನು ಕೇಳಿದರೆ ಇದು ‘ನಾನ್ ಸ್ಟಾಪ್’ ಬಸ್ ಎಂದು ಹೇಳುತ್ತಾರೆ. ಗಡಸು ಧ್ವನಿಯಿಂದ ಗದರಿ ಉತ್ತರ ನೀಡುತ್ತಾರೆ.

‘ಮಾದಾಪುರ ಹಾಗೂ ಹೈರಿಗೆ ಗ್ರಾಮಗಳಿಗೆ ದಿನನಿತ್ಯ ಅಕ್ಕಪಕ್ಕದ ಊರುಗಳಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಮಾತ್ರವಲ್ಲದೆ, ಸರ್ಕಾರಿ ನೌಕರರು ಮೈಸೂರು ಮತ್ತು ಎಚ್.ಡಿ.ಕೋಟೆಯಿಂದ ಬಂದು ಹೋಗುತ್ತಾರೆ. ಶಿಕ್ಷಕರು,ಉಪನ್ಯಾಸಕರಿಗೂ ಇದರಿಂದ ಬಹಳ ತೊಂದರೆಯಾಗಿದೆ. ವಿದ್ಯಾರ್ಥಿಗಳು ತರಗತಿಗೆ ಹಾಜರಾಗುವಲ್ಲಿ ವಿಳಂಬವಾಗುತ್ತಿದೆ. ಚಿಕಿತ್ಸೆಗಾಗಿ ಮೈಸೂರು ಅಥವಾ ಎಚ್.ಡಿ.ಕೋಟೆ ಕಡೆಗೆ ತೆರಳಬೇಕಾದ ರೋಗಿಗಳು ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ಸಾರಿಗೆ ನಿಗಮದ ಅಧಿಕಾರಿಗಳು, ಜನಪ್ರತಿನಿಧಿಗಳು ಈ ಎರಡೂ ಗ್ರಾಮಗಳಲ್ಲಿ ಬಸ್ ನಿಲುಗಡೆಗೆ ಅವಕಾಶ ಮಾಡಿಕೊಟ್ಟು ಜನರಿಗೆ ಅನುಕೂಲ ಕಲ್ಪಿಸಲಿ.

-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ. ತಾಲ್ಲೂಕು.

ಆಂದೋಲನ ಡೆಸ್ಕ್

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

2 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

3 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

3 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

3 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

3 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

3 hours ago