ಓದುಗರ ಪತ್ರ
ಎಚ್.ಡಿ.ಕೋಟೆಯಿಂದ ಮೈಸೂರು ಕಡೆಗೆ ಹಾಗೂ ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗವಾಗಿ ಸಂಚರಿಸುವ ಸಾರಿಗೆ ನಿಗಮದ ಬಸ್ ಗಳು ಹೈರಿಗೆ, ಮಾದಾಪುರ ಗ್ರಾಮಗಳಲ್ಲಿ ನಿಲುಗಡೆ ಮಾಡುವುದಿಲ್ಲ. ಈ ಎರಡೂ ಗ್ರಾಮಗಳು ಸಾಕಷ್ಟು ಜನಸಂಖ್ಯೆಯನ್ನು ಹೊಂದಿವೆ. ಗ್ರಾಮಸ್ಥರು, ವಿದ್ಯಾರ್ಥಿಗಳು ಬಸ್ ನಿರ್ವಾಹಕರು ಅಥವಾ ಚಾಲಕರನ್ನು ಕೇಳಿದರೆ ಇದು ‘ನಾನ್ ಸ್ಟಾಪ್’ ಬಸ್ ಎಂದು ಹೇಳುತ್ತಾರೆ. ಗಡಸು ಧ್ವನಿಯಿಂದ ಗದರಿ ಉತ್ತರ ನೀಡುತ್ತಾರೆ.
‘ಮಾದಾಪುರ ಹಾಗೂ ಹೈರಿಗೆ ಗ್ರಾಮಗಳಿಗೆ ದಿನನಿತ್ಯ ಅಕ್ಕಪಕ್ಕದ ಊರುಗಳಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಮಾತ್ರವಲ್ಲದೆ, ಸರ್ಕಾರಿ ನೌಕರರು ಮೈಸೂರು ಮತ್ತು ಎಚ್.ಡಿ.ಕೋಟೆಯಿಂದ ಬಂದು ಹೋಗುತ್ತಾರೆ. ಶಿಕ್ಷಕರು,ಉಪನ್ಯಾಸಕರಿಗೂ ಇದರಿಂದ ಬಹಳ ತೊಂದರೆಯಾಗಿದೆ. ವಿದ್ಯಾರ್ಥಿಗಳು ತರಗತಿಗೆ ಹಾಜರಾಗುವಲ್ಲಿ ವಿಳಂಬವಾಗುತ್ತಿದೆ. ಚಿಕಿತ್ಸೆಗಾಗಿ ಮೈಸೂರು ಅಥವಾ ಎಚ್.ಡಿ.ಕೋಟೆ ಕಡೆಗೆ ತೆರಳಬೇಕಾದ ರೋಗಿಗಳು ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ಸಾರಿಗೆ ನಿಗಮದ ಅಧಿಕಾರಿಗಳು, ಜನಪ್ರತಿನಿಧಿಗಳು ಈ ಎರಡೂ ಗ್ರಾಮಗಳಲ್ಲಿ ಬಸ್ ನಿಲುಗಡೆಗೆ ಅವಕಾಶ ಮಾಡಿಕೊಟ್ಟು ಜನರಿಗೆ ಅನುಕೂಲ ಕಲ್ಪಿಸಲಿ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ. ತಾಲ್ಲೂಕು.
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…