ಓದುಗರ ಪತ್ರ
ಮೈಸೂರು ಜಿಲ್ಲೆ, ಎಚ್.ಡಿ. ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ‘ಮಲಾರ ಕಾಲೋನಿ’ ಗ್ರಾಮವು ಒಂದು ಸ್ವಚ್ಛ ಗ್ರಾಮವಾಗಿದೆ. ಈ ಗ್ರಾಮದಲ್ಲಿ ಪರಿಶಿಷ್ಟ ಜಾತಿಯವರು ಹೆಚ್ಚಾಗಿ ವಾಸವಿದ್ದಾರೆ. ಬೆಳಗನಹಳ್ಳಿ ಕಾವಲ್ನ ಸರ್ವೆ ನಂಬರ್ ೧ರಲ್ಲಿ ೨೦೧೦-೧೧ರಲ್ಲಿ ಆರ್ಟಿಸಿ ಸ್ಕೆಚ್ ಆಗಿದೆ. ಇಲ್ಲಿ ಸುಮಾರು ೧ ಎಕರೆ, ಐದು ಗುಂಟೆ ಜಾಗವಿದ್ದು, ಅಕ್ಕ ಪಕ್ಕದವರು ಒತ್ತುವರಿ ಮಾಡಿಕೊಂಡಿದ್ದಾರೆ.
ಗ್ರಾಮದಲ್ಲಿ ಸಾವು ಸಂಭವಿಸಿದರೆ ಶವಸಂಸ್ಕಾರ ಮಾಡಲು ಜಾಗವಿಲ್ಲದೆ ಪರದಾಡುವ ಪರಿಸ್ಥಿತಿ ಇದೆ. ಈ ಗ್ರಾಮದಲ್ಲಿ ಬಡ ಕುಟುಂಬಗಳು ಹೆಚ್ಚು ಇವೆ. ಕೆಲವರು ತಮ್ಮ ಜಮೀನಿನಲ್ಲಿ ಶವ ಸಂಸ್ಕಾರ ಮಾಡುತ್ತಾರೆ, ಕೆಲವರಿಗೆ ಜಮೀನು ಇಲ್ಲದೆ, ಶವ ಸಂಸ್ಕಾರ ಮಾಡಲು ಜಾಗವೂ ಇಲ್ಲದೆ ಪರದಾಡುತ್ತಿದ್ದಾರೆ. ಈ ವಿಚಾರವನ್ನು ತಾಲ್ಲೂಕು ಕಚೇರಿಯ ಮೇಲಧಿಕಾರಿಗಳ ಗಮನಕ್ಕೆ ತಂದಿದ್ದರೂ ಸ್ಮಶಾನ ಜಾಗ ಒದಗಿಸಲು ಮುಂದಾಗಿಲ್ಲ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು, ಶಾಸಕರು, ಸಂಸದರು, ಮೈಸೂರು ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ‘ಮಲಾರಾ ಕಾಲೋನಿ’ ಗ್ರಾಮಕ್ಕೆ ಶವಸಂಸ್ಕಾರ ಮಾಡಲು ಒತ್ತುವರಿ ಆಗಿರುವ ಜಾಗವನ್ನು ಬಿಡಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಶವ ಸಂಸಾರ ಮಾಡಲು ಶೆಡ್ಡು ನಿರ್ಮಾಣ ಮಾಡಿಕೊಡಬೇಕು ಎಂಬುದು ಗ್ರಾಮಸ್ಥರ ಬೇಡಿಕೆಯಾಗಿದೆ.
-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…