Andolana originals

ಓದುಗರ ಪತ್ರ: ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ೨೦೨೩-೨೪ ಸಾಲಿನಲ್ಲಿ ಸಂಭವಿಸಿದ ಅತಿವೃಷ್ಟಿಯಿಂದಾಗಿ ಮನೆ ಕಳೆದುಕೊಂಡವರಿಗೆ ಪರಿಹಾರವನ್ನು ಘೋಷಿಸಿತ್ತು. ಆದರೆ, ಸರ್ಕಾರ ಬದಲಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪರಿಹಾರ ಮೊತ್ತದ ಕೊನೆಯ ಕಂತನ್ನು ಬಾಕಿ ಉಳಿಸಿಕೊಂಡಿದ್ದು, ಫಲಾನುಭವಿ ಗಳು ಮನೆ ಪೂರ್ಣಗೊಳಿಸಲು ಪರದಾಡುವಂತಾಗಿದೆ.

ಸರ್ಕಾರ ಮನೆಗಳ ಹಾನಿಯ ಪ್ರಮಾಣವನ್ನು ಪರಿಗಣಿಸಿ ಪರಿಹಾರನ್ನು ಘೋಷಿಸಿತ್ತು. ಹೆಚ್ಚು ಹಾನಿಯಾದ ಮನೆಗಳಿಗೆ ೩ ಲಕ್ಷ ರೂ.ಗಳಿಂದ ೫ ಲಕ್ಷ ರೂ.ಗಳವರೆಗೂ ಪರಿಹಾರವನ್ನು ಘೋಷಿಸಿತ್ತು. ಆದರೆ ಸರ್ಕಾರ ಬದಲಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಐದು ಲಕ್ಷ ರೂ. ಪರಿಹಾರ ಮೊತ್ತದ ಕೊನೆಯ ಕಂತಿನಲ್ಲಿ ೨೫,೦೦೦ ರೂ. ಗಳನ್ನು ಬಾಕಿ ಉಳಿಸಿಕೊಂಡಿದೆ. ಕೊನೆಯ ಬಿಲ್‌ನಲ್ಲಿ ಸರ್ಕಾರ ಫಲಾನುಭವಿಗಳ ಖಾತೆಗೆ ೮೦,೦೦೦ ರೂ.ಗಳನ್ನು ಮಾತ್ರ ಹಾಕಿದ್ದು, ಉಳಿದ ೨೫,೦೦೦ ರೂ. ಗಳನ್ನು ಬಾಕಿ ಉಳಿಸಿಕೊಂಡಿದೆ. ಹಾಗೆಯೇ ಬಸವ ಕಲ್ಯಾಣ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ೨೦೨೩-೨೪ನೇ ಸಾಲಿನ ಫಲಾನುಭವಿಗಳ ಖಾತೆಗೂ ಹಣ ಮಂಜೂರು ಮಾಡಿ, ಬಳಿಕ ಆ ಹಣವನ್ನು ಸರ್ಕಾರವೇ ಹಿಂಪಡೆದುಕೊಂಡಿದೆ. ಇದರಿಂದ ಮನೆ ಕಳೆದುಕೊಂಡವರು ಮನೆಯನ್ನು ಪೂರ್ಣವಾಗಿ ನಿರ್ಮಿಸಿಕೊಳ್ಳಲಾಗದೆ ಪರದಾಡುವಂತಾಗಿದೆ. ಇದರೊಂದಿಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಮನೆಗಳಿಗೂ ಸರಿಯಾಗಿ ಪರಿಹಾರವನ್ನು ನೀಡಿಲ್ಲ. ಇದರಿಂದಾಗಿ ಮನೆ ನಿರ್ಮಾಣ ಮಾಡಿಕೊಳ್ಳಲು ಬಡಜನರು ಪರದಾಡುವಂತಾಗಿದ್ದು, ಸರ್ಕಾರ ಈ ಬಗ್ಗೆ ಕ್ರಮವಹಿಸಿ ಆದಷ್ಟು ಬೇಗ ಪರಿಹಾರವನ್ನು ನೀಡಬೇಕು.

-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿದ ಜೆಡಿಎಸ್‌

ಬೆಂಗಳೂರು: ಜೆಡಿಎಸ್‌ ಪಕ್ಷ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ…

26 mins ago

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಶೂನ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಗುಂಡ್ಲುಪೇಟೆ: ಪಂಚ ಗ್ಯಾರಂಟಿಗಳ ಘೋಷಣೆಯೊಂದಿಗೆ ಅಧಿಕಾರಕ್ಕೇರಿದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಂಪೂರ್ಣವಾಗಿ ಕುಸಿದಿದೆ. ಈ ನಡುವೆ ಗ್ಯಾರಂಟಿಗಳಿಂದ ಸರ್ಕಾರಕ್ಕೆ…

57 mins ago

ಸ್ಪೀಕರ್‌ ಆಫ್‌ ದಿ ನೆಸ್ಸೆಟ್‌ ಪದಕ ಪಡೆದ ಮೊದಲ ಜಾಗತಿಕ ನಾಯಕ ಪ್ರಧಾನಿ ನರೇಂದ್ರ ಮೋದಿ

ಇಸ್ರೇಲ್:‌ ಭಾರತ ಮತ್ತು ಇಸ್ರೇಲ್‌ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ…

1 hour ago

ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಜಯ್‌ ದೇವರಕೊಂಡ-ರಶ್ಮಿಕಾ ಮಂದಣ್ಣ

ಉದಯಪುರ: ಉದಯಪುರದ ಅರಮನೆಯಲ್ಲಿ ವಿಜಯ್‌ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ…

1 hour ago

ಮೈಸೂರು ರೇಷ್ಮೆಗೆ ದೊಡ್ಡ ಇತಿಹಾಸವಿದೆ: ಬಡಗಲಪುರ ನಾಗೇಂದ್ರ

ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ…

2 hours ago

ಓದುಗರ ಪತ್ರ: ಬಜೆಟ್ ಪರಿಸರ ಸಂರಕ್ಷಣೆಗೆ ಒತ್ತು ನೀಡಲಿ

ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…

6 hours ago