Andolana originals

ಓದುಗರ ಪತ್ರ: ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ೨೦೨೩-೨೪ ಸಾಲಿನಲ್ಲಿ ಸಂಭವಿಸಿದ ಅತಿವೃಷ್ಟಿಯಿಂದಾಗಿ ಮನೆ ಕಳೆದುಕೊಂಡವರಿಗೆ ಪರಿಹಾರವನ್ನು ಘೋಷಿಸಿತ್ತು. ಆದರೆ, ಸರ್ಕಾರ ಬದಲಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪರಿಹಾರ ಮೊತ್ತದ ಕೊನೆಯ ಕಂತನ್ನು ಬಾಕಿ ಉಳಿಸಿಕೊಂಡಿದ್ದು, ಫಲಾನುಭವಿ ಗಳು ಮನೆ ಪೂರ್ಣಗೊಳಿಸಲು ಪರದಾಡುವಂತಾಗಿದೆ.

ಸರ್ಕಾರ ಮನೆಗಳ ಹಾನಿಯ ಪ್ರಮಾಣವನ್ನು ಪರಿಗಣಿಸಿ ಪರಿಹಾರನ್ನು ಘೋಷಿಸಿತ್ತು. ಹೆಚ್ಚು ಹಾನಿಯಾದ ಮನೆಗಳಿಗೆ ೩ ಲಕ್ಷ ರೂ.ಗಳಿಂದ ೫ ಲಕ್ಷ ರೂ.ಗಳವರೆಗೂ ಪರಿಹಾರವನ್ನು ಘೋಷಿಸಿತ್ತು. ಆದರೆ ಸರ್ಕಾರ ಬದಲಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಐದು ಲಕ್ಷ ರೂ. ಪರಿಹಾರ ಮೊತ್ತದ ಕೊನೆಯ ಕಂತಿನಲ್ಲಿ ೨೫,೦೦೦ ರೂ. ಗಳನ್ನು ಬಾಕಿ ಉಳಿಸಿಕೊಂಡಿದೆ. ಕೊನೆಯ ಬಿಲ್‌ನಲ್ಲಿ ಸರ್ಕಾರ ಫಲಾನುಭವಿಗಳ ಖಾತೆಗೆ ೮೦,೦೦೦ ರೂ.ಗಳನ್ನು ಮಾತ್ರ ಹಾಕಿದ್ದು, ಉಳಿದ ೨೫,೦೦೦ ರೂ. ಗಳನ್ನು ಬಾಕಿ ಉಳಿಸಿಕೊಂಡಿದೆ. ಹಾಗೆಯೇ ಬಸವ ಕಲ್ಯಾಣ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ೨೦೨೩-೨೪ನೇ ಸಾಲಿನ ಫಲಾನುಭವಿಗಳ ಖಾತೆಗೂ ಹಣ ಮಂಜೂರು ಮಾಡಿ, ಬಳಿಕ ಆ ಹಣವನ್ನು ಸರ್ಕಾರವೇ ಹಿಂಪಡೆದುಕೊಂಡಿದೆ. ಇದರಿಂದ ಮನೆ ಕಳೆದುಕೊಂಡವರು ಮನೆಯನ್ನು ಪೂರ್ಣವಾಗಿ ನಿರ್ಮಿಸಿಕೊಳ್ಳಲಾಗದೆ ಪರದಾಡುವಂತಾಗಿದೆ. ಇದರೊಂದಿಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಮನೆಗಳಿಗೂ ಸರಿಯಾಗಿ ಪರಿಹಾರವನ್ನು ನೀಡಿಲ್ಲ. ಇದರಿಂದಾಗಿ ಮನೆ ನಿರ್ಮಾಣ ಮಾಡಿಕೊಳ್ಳಲು ಬಡಜನರು ಪರದಾಡುವಂತಾಗಿದ್ದು, ಸರ್ಕಾರ ಈ ಬಗ್ಗೆ ಕ್ರಮವಹಿಸಿ ಆದಷ್ಟು ಬೇಗ ಪರಿಹಾರವನ್ನು ನೀಡಬೇಕು.

-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

8 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

11 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

15 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

17 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

18 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

19 hours ago