ಓದುಗರ ಪತ್ರ
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ೨೦೨೩-೨೪ ಸಾಲಿನಲ್ಲಿ ಸಂಭವಿಸಿದ ಅತಿವೃಷ್ಟಿಯಿಂದಾಗಿ ಮನೆ ಕಳೆದುಕೊಂಡವರಿಗೆ ಪರಿಹಾರವನ್ನು ಘೋಷಿಸಿತ್ತು. ಆದರೆ, ಸರ್ಕಾರ ಬದಲಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪರಿಹಾರ ಮೊತ್ತದ ಕೊನೆಯ ಕಂತನ್ನು ಬಾಕಿ ಉಳಿಸಿಕೊಂಡಿದ್ದು, ಫಲಾನುಭವಿ ಗಳು ಮನೆ ಪೂರ್ಣಗೊಳಿಸಲು ಪರದಾಡುವಂತಾಗಿದೆ.
ಸರ್ಕಾರ ಮನೆಗಳ ಹಾನಿಯ ಪ್ರಮಾಣವನ್ನು ಪರಿಗಣಿಸಿ ಪರಿಹಾರನ್ನು ಘೋಷಿಸಿತ್ತು. ಹೆಚ್ಚು ಹಾನಿಯಾದ ಮನೆಗಳಿಗೆ ೩ ಲಕ್ಷ ರೂ.ಗಳಿಂದ ೫ ಲಕ್ಷ ರೂ.ಗಳವರೆಗೂ ಪರಿಹಾರವನ್ನು ಘೋಷಿಸಿತ್ತು. ಆದರೆ ಸರ್ಕಾರ ಬದಲಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಐದು ಲಕ್ಷ ರೂ. ಪರಿಹಾರ ಮೊತ್ತದ ಕೊನೆಯ ಕಂತಿನಲ್ಲಿ ೨೫,೦೦೦ ರೂ. ಗಳನ್ನು ಬಾಕಿ ಉಳಿಸಿಕೊಂಡಿದೆ. ಕೊನೆಯ ಬಿಲ್ನಲ್ಲಿ ಸರ್ಕಾರ ಫಲಾನುಭವಿಗಳ ಖಾತೆಗೆ ೮೦,೦೦೦ ರೂ.ಗಳನ್ನು ಮಾತ್ರ ಹಾಕಿದ್ದು, ಉಳಿದ ೨೫,೦೦೦ ರೂ. ಗಳನ್ನು ಬಾಕಿ ಉಳಿಸಿಕೊಂಡಿದೆ. ಹಾಗೆಯೇ ಬಸವ ಕಲ್ಯಾಣ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ೨೦೨೩-೨೪ನೇ ಸಾಲಿನ ಫಲಾನುಭವಿಗಳ ಖಾತೆಗೂ ಹಣ ಮಂಜೂರು ಮಾಡಿ, ಬಳಿಕ ಆ ಹಣವನ್ನು ಸರ್ಕಾರವೇ ಹಿಂಪಡೆದುಕೊಂಡಿದೆ. ಇದರಿಂದ ಮನೆ ಕಳೆದುಕೊಂಡವರು ಮನೆಯನ್ನು ಪೂರ್ಣವಾಗಿ ನಿರ್ಮಿಸಿಕೊಳ್ಳಲಾಗದೆ ಪರದಾಡುವಂತಾಗಿದೆ. ಇದರೊಂದಿಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಮನೆಗಳಿಗೂ ಸರಿಯಾಗಿ ಪರಿಹಾರವನ್ನು ನೀಡಿಲ್ಲ. ಇದರಿಂದಾಗಿ ಮನೆ ನಿರ್ಮಾಣ ಮಾಡಿಕೊಳ್ಳಲು ಬಡಜನರು ಪರದಾಡುವಂತಾಗಿದ್ದು, ಸರ್ಕಾರ ಈ ಬಗ್ಗೆ ಕ್ರಮವಹಿಸಿ ಆದಷ್ಟು ಬೇಗ ಪರಿಹಾರವನ್ನು ನೀಡಬೇಕು.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…