ಓದುಗರ ಪತ್ರ
ಹೆಚ್.ಡಿ. ಕೋಟೆ ಪಟ್ಟಣದಲ್ಲಿ ಸಾರ್ವಜನಿಕ ಆಸ್ಪತ್ರೆ ಹಾಗೂ ಮಕ್ಕಳ ಆಸ್ಪತ್ರೆ ಪ್ರತ್ಯೇಕವಾಗಿವೆ. ಆದರೆ ಎರಡೂ ಆಸ್ಪತ್ರೆಗಳಿಗೆ ಹೊರ ರೋಗಿಗಳ ಆರೋಗ್ಯ ತಪಾಸಣಾ ಚೀಟಿ ಪಡೆಯಲು ಒಂದೇ ಕೌಂಟರ್ ಇರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ.
ಮಕ್ಕಳ ಆಸ್ಪತ್ರೆಯಲ್ಲಿ ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರು ಚಿಕಿತ್ಸೆ ಪಡೆಯಬೇಕಾದರೆ ಮಕ್ಕಳ ಆಸ್ಪತ್ರೆಯ ಎದುರಿನ ಸಾರ್ವಜನಿಕ ಆಸ್ಪತ್ರೆಗೆ ಬಂದು ತಪಾಸಣಾ ಚೀಟಿ ಪೆಯುವುದು ಅಗತ್ಯವಾಗಿದೆ. ಆದರೆ ಈ ಆಸ್ಪತ್ರೆಗೆ ಬರಲು ರಸ್ತೆಯನ್ನು ದಾಟಿ ಬರಬೇಕಾಗಿರುವುದರಿಂದ ಹಲವಾರು ಬಾರಿ ರಸ್ತೆ ಅಪಘಾತದಲ್ಲಿ ಸಾರ್ವಜನಿಕರು ಕೈಕಾಲು ಮುರಿದುಕೊಂಡಿರುವ ಘಟನೆಗಳು ನಡೆದಿವೆ. ಆದ್ದರಿಂದ ಶಾಸಕರು ಹಾಗೂ ಆಸ್ಪತ್ರೆ ಮುಖ್ಯಸ್ಥರು ಈ ಸಮಸ್ಯೆಯನ್ನು ಮನಗಂಡು ಎರಡೂ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿ ತಪಾಸಣಾ ಚೀಟಿ ಪಡೆಯಲು ಅವಕಾಶ ಕಲ್ಪಿಸಬೇಕು.
ಆಸ್ಪತ್ರೆಯಲ್ಲಿ ಇರುವ ವ್ಹೀಲ್ ಚೇರ್ಗಳ ಚಕ್ರ ಮುರಿದು ಹಾಳಾಗಿದ್ದು, ಇದರಿಂದ ಮೂಳೆ ಮುರಿತಕ್ಕೊಳಗಾಗಿ ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ವಯೋವೃದ್ಧರನ್ನು ಕರೆದೊಯ್ಯಲು ತೊಂದರೆಯಾಗಿದೆ. ಸಂಬಂಧಪಟ್ಟವರು ಕೂಡಲೇ ರೋಗಿಗಳಿಗೆ ಹೊಸ ವ್ಹೀಲ್ಚೇರ್ ವ್ಯವಸ್ಥೆ ಮಾಡಬೇಕಾಗಿದೆ.
– ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…