ಓದುಗರ ಪತ್ರ
ಮೈಸೂರಿನ ಅಶೋಕಪುರಂ ರೈಲು ನಿಲ್ದಾಣ ಅತ್ಯಾಧುನಿಕ ವಿನ್ಯಾಸದಲ್ಲಿ ನಿರ್ಮಾಣಗೊಂಡಿದ್ದು, ಆರು ಪ್ಲಾಟ್ ಫಾರ್ಮ್ಗಳನ್ನು ಹೊಂದಿದೆ. ಈ ರೈಲು ನಿಲ್ದಾಣದಲ್ಲಿ, ಎಸ್ಕಲೇಟರ್ ವ್ಯವಸ್ಥೆ ಇಲ್ಲದೇ 3ರಿಂದ 6 ನೇ ಪ್ಲಾಟ್ ಫಾರ್ಮ್ಗಳಿಗೆ ಹೋಗಲು ಮೆಟ್ಟಿಲುಗಳನ್ನು ಹತ್ತಿಕೊಂಡು ಹೋಗಬೇಕಾಗಿದೆ. ಹಿರಿಯ ನಾಗರಿಕರು, ವಯಸ್ಸಾದವರು ಮತ್ತು ವಿಶೇಷಚೇತನರು ಈ ಪ್ಲಾಟ್ಫಾರ್ಮ್ಗಳಿಗೆ ತಲುಪುವುದಾದರೂ ಹೇಗೆ?.
ಇದರ ಬಗ್ಗೆ ಕನಿಷ್ಠ ತಿಳಿವಳಿಕೆಯಾದರೂ, ಸಂಬಂಧಪಟ್ಟವರಿಗೆ ಇರಬೇಕಲ್ಲವೇ? ಸಾರ್ವಜನಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸದೇ ಕೋಟ್ಯಂತರ ರೂ. ಖರ್ಚು ಮಾಡಿ ಹೊಸ ರೈಲು ನಿಲ್ದಾಣ ನಿರ್ಮಾಣ ಮಾಡಿರುವುದು ಕೇವಲ ಪ್ರಚಾರಕ್ಕಾಗಿಯೇ ಎಂಬ ಪ್ರಶ್ನೆ ಸಾರ್ವಜನಿಕರನ್ನು ಕಾಡುತ್ತಿದೆ.
ಈ ರೈಲು ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಕನಿಷ್ಠ ಮೂಲ ಭೂತ ಸೌಕರ್ಯವೂ ಇಲ್ಲ. ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಕೂಡಲೇ ನಿಲ್ದಾಣದಲ್ಲಿ ಎಸ್ಕಲೇಟರ್ಅನ್ನು ಅಳವಡಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…