Andolana originals

ಓದುಗರ ಪತ್ರ:  ಅಶೋಕಪುರಂ ರೈಲು ನಿಲ್ದಾಣದಲ್ಲಿ ಎಸ್ಕಲೇಟರ್ ವ್ಯವಸ್ಥೆ ಕಲ್ಪಿಸಿ

ಮೈಸೂರಿನ ಅಶೋಕಪುರಂ ರೈಲು ನಿಲ್ದಾಣ ಅತ್ಯಾಧುನಿಕ ವಿನ್ಯಾಸದಲ್ಲಿ ನಿರ್ಮಾಣಗೊಂಡಿದ್ದು, ಆರು ಪ್ಲಾಟ್ ಫಾರ್ಮ್‌ಗಳನ್ನು ಹೊಂದಿದೆ. ಈ ರೈಲು ನಿಲ್ದಾಣದಲ್ಲಿ, ಎಸ್ಕಲೇಟರ್ ವ್ಯವಸ್ಥೆ ಇಲ್ಲದೇ 3ರಿಂದ 6 ನೇ ಪ್ಲಾಟ್ ಫಾರ್ಮ್‌ಗಳಿಗೆ ಹೋಗಲು ಮೆಟ್ಟಿಲುಗಳನ್ನು ಹತ್ತಿಕೊಂಡು ಹೋಗಬೇಕಾಗಿದೆ. ಹಿರಿಯ ನಾಗರಿಕರು, ವಯಸ್ಸಾದವರು ಮತ್ತು ವಿಶೇಷಚೇತನರು ಈ ಪ್ಲಾಟ್‌ಫಾರ್ಮ್‌ಗಳಿಗೆ ತಲುಪುವುದಾದರೂ ಹೇಗೆ?.

ಇದರ ಬಗ್ಗೆ ಕನಿಷ್ಠ ತಿಳಿವಳಿಕೆಯಾದರೂ, ಸಂಬಂಧಪಟ್ಟವರಿಗೆ ಇರಬೇಕಲ್ಲವೇ? ಸಾರ್ವಜನಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸದೇ ಕೋಟ್ಯಂತರ ರೂ. ಖರ್ಚು ಮಾಡಿ ಹೊಸ ರೈಲು ನಿಲ್ದಾಣ ನಿರ್ಮಾಣ ಮಾಡಿರುವುದು ಕೇವಲ ಪ್ರಚಾರಕ್ಕಾಗಿಯೇ ಎಂಬ ಪ್ರಶ್ನೆ ಸಾರ್ವಜನಿಕರನ್ನು ಕಾಡುತ್ತಿದೆ.

ಈ ರೈಲು ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಕನಿಷ್ಠ ಮೂಲ ಭೂತ ಸೌಕರ್ಯವೂ ಇಲ್ಲ. ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಕೂಡಲೇ ನಿಲ್ದಾಣದಲ್ಲಿ ಎಸ್ಕಲೇಟರ್‌ಅನ್ನು ಅಳವಡಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

20 mins ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

1 hour ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

2 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

2 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

2 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

2 hours ago