Andolana originals

ಓದುಗರ ಪತ್ರ:  ಅಶೋಕಪುರಂ ರೈಲು ನಿಲ್ದಾಣದಲ್ಲಿ ಎಸ್ಕಲೇಟರ್ ವ್ಯವಸ್ಥೆ ಕಲ್ಪಿಸಿ

ಮೈಸೂರಿನ ಅಶೋಕಪುರಂ ರೈಲು ನಿಲ್ದಾಣ ಅತ್ಯಾಧುನಿಕ ವಿನ್ಯಾಸದಲ್ಲಿ ನಿರ್ಮಾಣಗೊಂಡಿದ್ದು, ಆರು ಪ್ಲಾಟ್ ಫಾರ್ಮ್‌ಗಳನ್ನು ಹೊಂದಿದೆ. ಈ ರೈಲು ನಿಲ್ದಾಣದಲ್ಲಿ, ಎಸ್ಕಲೇಟರ್ ವ್ಯವಸ್ಥೆ ಇಲ್ಲದೇ 3ರಿಂದ 6 ನೇ ಪ್ಲಾಟ್ ಫಾರ್ಮ್‌ಗಳಿಗೆ ಹೋಗಲು ಮೆಟ್ಟಿಲುಗಳನ್ನು ಹತ್ತಿಕೊಂಡು ಹೋಗಬೇಕಾಗಿದೆ. ಹಿರಿಯ ನಾಗರಿಕರು, ವಯಸ್ಸಾದವರು ಮತ್ತು ವಿಶೇಷಚೇತನರು ಈ ಪ್ಲಾಟ್‌ಫಾರ್ಮ್‌ಗಳಿಗೆ ತಲುಪುವುದಾದರೂ ಹೇಗೆ?.

ಇದರ ಬಗ್ಗೆ ಕನಿಷ್ಠ ತಿಳಿವಳಿಕೆಯಾದರೂ, ಸಂಬಂಧಪಟ್ಟವರಿಗೆ ಇರಬೇಕಲ್ಲವೇ? ಸಾರ್ವಜನಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸದೇ ಕೋಟ್ಯಂತರ ರೂ. ಖರ್ಚು ಮಾಡಿ ಹೊಸ ರೈಲು ನಿಲ್ದಾಣ ನಿರ್ಮಾಣ ಮಾಡಿರುವುದು ಕೇವಲ ಪ್ರಚಾರಕ್ಕಾಗಿಯೇ ಎಂಬ ಪ್ರಶ್ನೆ ಸಾರ್ವಜನಿಕರನ್ನು ಕಾಡುತ್ತಿದೆ.

ಈ ರೈಲು ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಕನಿಷ್ಠ ಮೂಲ ಭೂತ ಸೌಕರ್ಯವೂ ಇಲ್ಲ. ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಕೂಡಲೇ ನಿಲ್ದಾಣದಲ್ಲಿ ಎಸ್ಕಲೇಟರ್‌ಅನ್ನು ಅಳವಡಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

3 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

3 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

4 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

4 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

4 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

5 hours ago