ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪ ಮಂದಿ ಮೃತ ಪೌರ ಕಾರ್ಮಿಕರ ಕುಟುಂಬಗಳಿಗೆ ನೌಕರಿ ನೀಡದ ಕಾರಣ ಚಿಂದಿ ಆಯುತ್ತಿರುವುದು ಸಫಾಯಿಕರ್ಮಚಾರಿಗಳ ಆಯೋಗದ ಅಧ್ಯಕ್ಷ ರಘು ಅವರು ಆಯೋಜಿಸಿದ್ದ ಕುಂದುಕೊರತೆಗಳ ಸಭೆಯಲ್ಲಿ ಮಾಧ್ಯಮಗಳ ಮೂಲಕ ಬೆಳಕಿಗೆ ಬಂದಿದೆ.
ಮುಂಜಾನೆಯೇ ಎದ್ದು ನಗರವನ್ನು ಸ್ವಚ್ಛಗೊಳಿಸಿ ಸಮಾಜದ ಸ್ವಾಸ್ಥ್ಯ ಕಾಪಾಡುತ್ತಿರುವ ಪೌರ ಕಾರ್ಮಿಕರ ಸಮಸ್ಯೆಯನ್ನು ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳು ಕಾಳಜಿ ವಹಿಸಬೇಕು. ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರು ನೀಡಿರುವ ಭರವಸೆ ಶೀಘ್ರದಲ್ಲಿ ಅನುಷ್ಠಾನಗೊಂಡರೆ ಪೌರ ಕಾರ್ಮಿಕರಿಗೆ ನ್ಯಾಯ ಕಲ್ಪಿಸಿದಂತಾಗುತ್ತದೆ.
– ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…