Andolana originals

ಓದುಗರ ಪತ್ರ: ಕಾಲೇಜಿಗೆ ಮೂಲಸೌಕರ್ಯ ಒದಗಿಸಿ

ಸರಗೂರು ಮುಖ್ಯ ರಸ್ತೆಯಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜು ಅವ್ಯವಸ್ಥೆಗಳ ಆಗರವಾಗಿದ್ದು, ಕಟ್ಟಡದ ಗೋಡೆಗಳು ಕುಸಿದು ಬೀಳುವ ಹಂತಕ್ಕೆ ಬಂದು ತಲುಪಿವೆ.
ತಾಲ್ಲೂಕಿನ ಬಿಡಗಲು ಸಮೀಪದ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಒಂದೇ ಆವರಣದಲ್ಲಿದ್ದು, ಗ್ರಾಮೀಣ ಭಾಗದ ನೂರಾರು ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಆದರೆ ಈ ಶಾಲೆ ಮತ್ತು ಕಾಲೇಜಿನ ಕಟ್ಟಡದ ಕೆಲ ಗೋಡೆಗಳು ಕುಸಿದು ಬಿದ್ದಿದ್ದು, ಕೆಲ ಗೋಡೆಗಳು ಬಿರುಕು ಬಿಟ್ಟಿವೆ. ಅಲ್ಲದೆ ಕೆಲ ಭಾಗಗಳಲ್ಲಿ ಹೆಂಚುಗಳು ಮುರಿದು ಬಿದ್ದಿವೆ. ಇನ್ನು ಇಲ್ಲಿ ಶೌಚಾಲಯದ ವ್ಯವಸ್ಥೆಯೂ ಸರಿಯಾಗಿಲ್ಲ. ಹೀಗಾಗಿ ಶಾಲಾ-ಕಾಲೇಜಿನ ವಿದ್ಯಾರ್ಥಿನಿಯರಿಗೆ ತೊಂದರೆಯಾಗುತ್ತಿದೆ. ಶುದ್ದ ಕುಡಿಯುವ ನೀರಿನ ಸಮಸ್ಯೆಯೂ ಕಾಡುತ್ತಿದ್ದು, ವಿದ್ಯಾರ್ಥಿಗಳು ಮನೆಯಿಂದಲೇ ನೀರು ತಂದು ಕುಡಿಯಬೇಕಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಕಾಲೇಜಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಕಟ್ಟಡವನ್ನು ದುರಸ್ತಿಗೊಳಿಸುವ ಜತೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕಿದೆ.

ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

44 mins ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

50 mins ago

ಭಾರತೀನಗರ: ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…

55 mins ago

ದಕ್ಷ ಮತ್ತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ತಲ್ಲಣ

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…

1 hour ago

ಇದು ಉದ್ಯಾನವಲ್ಲ: ಅನೈತಿಕ ಚಟುವಟಿಕೆಗಳ ತಾಣ

ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…

1 hour ago