Andolana originals

ಓದುಗರ ಪತ್ರ: ಯುಜಿಸಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಿ

ಕಳೆದ ೨೦೨೪ರ ಆ.೩೦ರಂದು ಕಾಲೇಜು ಶಿಕ್ಷಣ ಇಲಾಖೆಯು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿತು. ಅದರ ಪ್ರಕಾರ ಅನುಭವಿ ಅತಿಥಿ ಉಪನ್ಯಾಸಕರಿಗೆ ಹೆಚ್ಚು ಒತ್ತು ನೀಡಲಾಗಿತ್ತು. ಈ ಅಧಿಸೂಚನೆಯ ಅನ್ವಯ ನೇಮಕಾತಿ ಪ್ರಕ್ರಿಯೆ ಆರಂಭವಾಗುವ ಮುನ್ನವೇ ೨೦೨೪ರ ಸೆ.೧೨ರಂದು ರಾಜ್ಯ ಉಚ್ಚ ನ್ಯಾಯಾಲಯದ ಏಕ ಸದಸ್ಯ ಪೀಠ ಯುಜಿಸಿ ಅರ್ಹತೆ ಉಳ್ಳವರನ್ನು ಮಾತ್ರ ಅತಿಥಿ ಉಪನ್ಯಾಸಕರಾಗಿ ನೇಮಿಸಿಕೊಳ್ಳಬೇಕು ಎಂದು ಆದೇಶಿಸಿತು.

ಆದರೆ ರಾಜ್ಯ ಉನ್ನತ ಶಿಕ್ಷಣ ಸಚಿವರು ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಯುಜಿಸಿ ಅನರ್ಹ ಅಭ್ಯರ್ಥಿಗಳ ಪರವಾಗಿ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದರು. ಆದರೆ ಉಚ್ಚ ನ್ಯಾಯಾಲಯದ ಬಹುಸದಸ್ಯ ಪೀಠವೂ ಏಕ ಸದಸ್ಯ ಪೀಠದ ಆದೇಶವನ್ನು ಎತ್ತಿಹಿಡಿಯಿತು. ಇದಾದ ಬಳಿಕ ೨೦೨೫ರ ಜ.೨ರಂದು ಯುಜಿಸಿ ಅರ್ಹ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರನ್ನಾಗಿ ನೇಮಿಸಿಕೊಳ್ಳಲು ಅಧಿಸೂಚನೆ ಹೊರಡಿಸಿತು. ಆದರೆ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಗೆ ಕೌನ್ಸಿಲಿಂಗ್ ಆರಂಭವಾಗುವ ಮುನ್ನವೇ ಉನ್ನತ ಶಿಕ್ಷಣ ಸಚಿವರ ಸಹಕಾರದಿಂದಲೋ ಏನೋ ಅನರ್ಹ ಅತಿಥಿ ಉಪನ್ಯಾಸಕರು ಅರ್ಹ ಅಭ್ಯರ್ಥಿಗಳ ನೇಮಕಾತಿಗೆ ಬೆಂಗಳೂರು ಹಾಗೂ ಧಾರವಾಡ ನ್ಯಾಯಾಲಯಗಳ ಮೂಲಕ ತಡೆಯಾಜ್ಞೆ ತಂದಿದ್ದಾರೆ. ಅನರ್ಹ ಅಭ್ಯರ್ಥಿಗಳಿಗೆ ಯುಜಿಸಿ ಅರ್ಹತೆ ಪಡೆದುಕೊಳ್ಳಲು ಮೂರು ವರ್ಷಗಳ ಕಾಲಾವಕಾಶವನ್ನು ನೀಡಲಾಗಿತ್ತು. ಆ ಕಾಲಾವಕಾಶ ಜ.೧೩ಕ್ಕೆ ಮುಗಿದು ಹೋಗಿದೆ. ಆದ್ದರಿಂದ ಉಚ್ಚ ನ್ಯಾಯಾಲಯದ ಆದೇಶದ ಮೇರೆಗೆ ಯುಜಿಸಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದು ಸರ್ಕಾರ ಸುಲಭವಾಗಿ ಈ ತಡೆಯಾಜ್ಞೆಯನ್ನು ತೆರವುಗೊಳಿಸಬಹುದು. ಆದರೆ ಉನ್ನತ ಶಿಕ್ಷಣ ಸಚಿವರು ತಡೆಯಾಜ್ಞೆಯನ್ನು ತೆರವುಗೊಳಿಸುವ ಬದಲು ಯುಜಿಸಿ ಅರ್ಹತಾ ಅಭ್ಯರ್ಥಿಗಳನ್ನು ನಿರುದ್ಯೋಗಿಗಳನ್ನಾಗಿ ಮಾಡಿ ಅನರ್ಹರನ್ನು ಅತಿಥಿ ಉಪನ್ಯಾಸಕರಾಗಿ ಮುಂದುವರಿಸುತ್ತಿದ್ದಾರೆ. ಉನ್ನತ ಶಿಕ್ಷಣ ಸಚಿವರ ಈ ವರ್ತನೆಯಿಂದ ಅರ್ಹ ಅಭ್ಯರ್ಥಿಗಳು ಬೇಸತ್ತು ಹೋಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಗ್ಗೆ ಗಮನಹರಿಸಿ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕಿದೆ.

-ಎಂ.ಆರ್.ಮಹೇಶ, ಮುಳ್ಳೂರು, ಸರಗೂರು ತಾ

ಆಂದೋಲನ ಡೆಸ್ಕ್

Recent Posts

WPL Champions | 2ನೇ ಬಾರಿ ಚಾಂಪಿಯನ್‌ ಆದ ಆರ್‌ಸಿಬಿ

ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…

5 hours ago

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

6 hours ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

8 hours ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

8 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

8 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

8 hours ago