ಓದುಗರ ಪತ್ರ
ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ನಿರಾಲಿ ಗ್ರಾಮದ ಕಳಿನಟ್ಟೆ ಹೊಳೆಗೆ ಕಪ್ಪೆ ಚಿಪ್ಪು ಸಂಗ್ರಹಿಸಲು ಇಳಿದಿದ್ದ ೧೧ ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆಯೇ ಇದಕ್ಕೆ ಸಾಕ್ಷಿಯಾಗಿದೆ. ಮೃತಪಟ್ಟವರಲ್ಲಿ ಬಹುತೇಕರು ೫೦ ವರ್ಷದೊಳಗಿನ ಮಹಿಳೆಯರೇ ಆಗಿದ್ದು, ತಮ್ಮ ಪೋಷಕರನ್ನು ಕಳೆದುಕೊಂಡ ಮಕ್ಕಳು ಹಾಗೂ ಅವರ ಮನೆಯವರ ಆಕ್ರಂದನ ಮನ ಕಲಕುವಂತಿತ್ತು. ಇಂತಹ ದುರ್ಘಟನೆಗಳು ನಡೆದಾಗ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಂದಷ್ಟು ಪರಿಹಾರ ನೀಡಿ ಕೈತೊಳೆದುಕೊಳ್ಳುತ್ತವೆ.ಕೆಲಸ ಮಾಡುವ ಸಂದರ್ಭದಲ್ಲಿ ಜೀವ ಕಳೆದುಕೊಂಡ ಕಾರ್ಮಿಕರ ಕುಟುಂಬದವರಿಗೆ ಸರ್ಕಾರ ಸೂಕ್ತ ಜೀವಾನಂಶ ಕೊಡಬೇಕು. ಮತ್ತು ಕೆಲಸ ಮಾಡುವ ಸ್ಥಳದಲ್ಲಿ ಕಾರ್ಮಿಕರಿಗೆ ಸೂಕ್ತ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸುವುದು ಅಗತ್ಯ.
-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…
ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…
ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…
ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…
ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ ಮಡಿಕೇರಿ: ಅಶ್ಲೀಲ…