ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ ಕಡಿಮೆ, ರಾಮಕೃಷ್ಣನಗರಕ್ಕೆ ನಗರ ಸಾರಿಗೆಯ ೬೧,೬೨,೧೩೫ ಸಂಖ್ಯೆಯ ಬಸ್ಸುಗಳು ಸಂಚರಿಸುತ್ತವೆ. ಆದರೆ ೧೩೫ ಸಂಖ್ಯೆಯ ಬಸ್ ಈ ಮಾರ್ಗದಲ್ಲಿ ಸಂಚರಿಸುವುದನ್ನು ನಿಲ್ಲಿಸಲಾಗಿದೆ.
ಮೈಸೂರಿನ ರಾಮಕೃಷ್ಣನಗರ ಅಭಿವೃದ್ಧಿ ಹೊಂದಿದ ಬಡಾವಣೆಯಾಗಿದೆ. ಇಂತಹ ಬಡಾವಣೆಗಳಲ್ಲಿ ದಿನನಿತ್ಯ ಬೆಳಿಗ್ಗೆ ಶಾಲಾ- ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ವಿವಿಧ ಕೆಲಸಗಳಿಗೆ ಹೋಗುವ ಸಾರ್ವಜನಿಕರು ಬಸ್ಸು ಲಭ್ಯವಿಲ್ಲದೆ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಅಲ್ಲದೆ ರಾಮಕೃಷ್ಣ ನಗರದಿಂದ ರೈಲ್ವೆ ನಿಲ್ದಾಣ ಮಾರ್ಗವಾಗಿ ಹಾದು ಹೋಗುವ ನಗರ ಸಾರಿಗೆ ಬಸ್ಸುಗಳು ಕೂಡ ತೀರ ವಿರಳವಾಗಿವೆ. ಆದ್ದರಿಂದ ಸಂಬಂಧಪಟ್ಟವರು ರಾಮಕೃಷ್ಣ ನಗರಕ್ಕೆ ಹೆಚ್ಚುವರಿ ಬಸ್ ಸೌಲಭ್ಯವನ್ನು ಕಲ್ಪಿಸಬೇಕೆಂದು ಮನವಿ.
–ಬಿ.ಎಸ್.ಸಾಯಿ ಸಂದೇಶ್,ಮೈಸೂರು
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…