Andolana originals

ಓದುಗರ ಪತ್ರ: ಕೆ.ಆರ್.ಎಸ್.ಗೆ ಭದ್ರತೆ ಒದಗಿಸಿ

ಮಂಡ್ಯ ಜಿಲ್ಲೆಯ ಜೀವನಾಡಿಯಾಗಿರುವ ಕೆ.ಆರ್.ಎಸ್. ಜಲಾಶಯಕ್ಕೆ ಸಾಕಷ್ಟು ಭದ್ರತೆ ಇಲ್ಲದೇ ಸಾರ್ವಜನಿಕರು ಎಲ್ಲೆಂದರಲ್ಲಿ ರಾಜಾರೋಷವಾಗಿ ಓಡಾಡುತ್ತಾರೆ. ಕ್ರೆಸ್ಟ್ ಗೇಟ್‌ಗಳ ಬಳಿ ಹೋಗಿ ವಿಡಿಯೋ, ರೀಲ್ಸ್ ಮಾಡುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆ.ಆರ್.ಎಸ್. ಜಲಾಶಯದ ಭದ್ರತೆಗಾಗಿ ಹತ್ತಾರು ಕೋಟಿ ರೂಪಾಯಿಗಳನ್ನು ಸರ್ಕಾರ ಖರ್ಚು ಮಾಡುವುದಾಗಿ ಹೇಳುತ್ತದೆ, ಆದರೆ ಈ ಹಣ ಯಾರ ಜೇಬು ಸೇರುತ್ತಿದೆ ಎಂಬುದು ತಿಳಿದಿಲ್ಲ.

ಸುಮಾರು ೨೫ ವರ್ಷಗಳ ಹಿಂದೆ, ಬಂಗಾರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ತಮಿಳುನಾಡು ಸರ್ಕಾರ ಕಾವೇರಿ ನದಿ ನೀರಿಗಾಗಿ ಕ್ಯಾತೆ ತೆಗೆದಿದ್ದು, ಆಗ, ಕೆ.ಆರ್.ಎಸ್. ಅನ್ನು ಸಂರಕ್ಷಣೆ ಮಾಡಿಕೊಳ್ಳುವ ಉದ್ದೇಶದಿಂದ ಅಂದಿನಿಂದಲೂ ಭದ್ರತೆ ಒದಗಿಸಲಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ, ಯಾವುದೇ ರೀತಿಯ ಭದ್ರತೆ ಇಲ್ಲದೇ ರಾಜಾರೋಷವಾಗಿ ಯಾರು ಬೇಕಾದರೂ ಇಲ್ಲಿ ಓಡಾಡಬಹುದು ಎನ್ನುವಂತಾಗಿದೆ.

ಶನಿವಾರ, ಭಾನುವಾರ ಮತ್ತು ರಜಾ ದಿನಗಳಲ್ಲಿ ಕೆಲವರು ಮದ್ಯ ಸೇವಿಸಿ ಬಾಟಲಿಗಳನ್ನು ಅಲ್ಲಿಯೇ ಬಿಸಾಡುತ್ತಾರೆ, ಅಲ್ಲದೆ ಅನೈತಿಕ ಚಟುವಟಿಕೆಗಳ ತಾಣವಾಗಿಯೂ ಮಾರ್ಪಟ್ಟಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಐತಿಹಾಸಿಕ ಜಲಾಶಯ, ಹಾಗೂ ಪ್ರಸಿದ್ಧ ಪ್ರವಾಸಿ ತಾಣದ ಮಹತ್ವವನ್ನೇ ಅರಿತಿಲ್ಲ. ಭದ್ರತಾ ಲೋಪದಿಂದ ಒಂದು ವೇಳೆ ಏನಾದರೂ ಅವಘಡ ಸಂಭವಿಸಿದರೆ, ಅದಕ್ಕೆ ಯಾರು ಹೊಣೆ?

 – ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

49 mins ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

1 hour ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

2 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

2 hours ago

ಬೆಟ್ಟಳ್ಳಿ ಮಾರಮ್ಮನ ಜಾತ್ರೆ ; ಹನೂರಲ್ಲಿ 2 ದಿನ ಮದ್ಯ ಮಾರಾಟ ನಿಷೇಧ

ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…

3 hours ago

ಕೆ.ಆರ್.ಆಸ್ಪತ್ರೆಯಲ್ಲಿ 100 ಹಾಸಿಗೆಯುಳ್ಳ ICU ಘಟಕ ಸ್ಥಾಪಿಸಿ : ಎಂಎಲ್‌ಸಿ ಕೆ.ಶಿವಕುಮಾರ್ ಮನವಿ

ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…

4 hours ago