ಓದುಗರ ಪತ್ರ
ಮಂಡ್ಯ ಜಿಲ್ಲೆಯ ಜೀವನಾಡಿಯಾಗಿರುವ ಕೆ.ಆರ್.ಎಸ್. ಜಲಾಶಯಕ್ಕೆ ಸಾಕಷ್ಟು ಭದ್ರತೆ ಇಲ್ಲದೇ ಸಾರ್ವಜನಿಕರು ಎಲ್ಲೆಂದರಲ್ಲಿ ರಾಜಾರೋಷವಾಗಿ ಓಡಾಡುತ್ತಾರೆ. ಕ್ರೆಸ್ಟ್ ಗೇಟ್ಗಳ ಬಳಿ ಹೋಗಿ ವಿಡಿಯೋ, ರೀಲ್ಸ್ ಮಾಡುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆ.ಆರ್.ಎಸ್. ಜಲಾಶಯದ ಭದ್ರತೆಗಾಗಿ ಹತ್ತಾರು ಕೋಟಿ ರೂಪಾಯಿಗಳನ್ನು ಸರ್ಕಾರ ಖರ್ಚು ಮಾಡುವುದಾಗಿ ಹೇಳುತ್ತದೆ, ಆದರೆ ಈ ಹಣ ಯಾರ ಜೇಬು ಸೇರುತ್ತಿದೆ ಎಂಬುದು ತಿಳಿದಿಲ್ಲ.
ಸುಮಾರು ೨೫ ವರ್ಷಗಳ ಹಿಂದೆ, ಬಂಗಾರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ತಮಿಳುನಾಡು ಸರ್ಕಾರ ಕಾವೇರಿ ನದಿ ನೀರಿಗಾಗಿ ಕ್ಯಾತೆ ತೆಗೆದಿದ್ದು, ಆಗ, ಕೆ.ಆರ್.ಎಸ್. ಅನ್ನು ಸಂರಕ್ಷಣೆ ಮಾಡಿಕೊಳ್ಳುವ ಉದ್ದೇಶದಿಂದ ಅಂದಿನಿಂದಲೂ ಭದ್ರತೆ ಒದಗಿಸಲಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ, ಯಾವುದೇ ರೀತಿಯ ಭದ್ರತೆ ಇಲ್ಲದೇ ರಾಜಾರೋಷವಾಗಿ ಯಾರು ಬೇಕಾದರೂ ಇಲ್ಲಿ ಓಡಾಡಬಹುದು ಎನ್ನುವಂತಾಗಿದೆ.
ಶನಿವಾರ, ಭಾನುವಾರ ಮತ್ತು ರಜಾ ದಿನಗಳಲ್ಲಿ ಕೆಲವರು ಮದ್ಯ ಸೇವಿಸಿ ಬಾಟಲಿಗಳನ್ನು ಅಲ್ಲಿಯೇ ಬಿಸಾಡುತ್ತಾರೆ, ಅಲ್ಲದೆ ಅನೈತಿಕ ಚಟುವಟಿಕೆಗಳ ತಾಣವಾಗಿಯೂ ಮಾರ್ಪಟ್ಟಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಐತಿಹಾಸಿಕ ಜಲಾಶಯ, ಹಾಗೂ ಪ್ರಸಿದ್ಧ ಪ್ರವಾಸಿ ತಾಣದ ಮಹತ್ವವನ್ನೇ ಅರಿತಿಲ್ಲ. ಭದ್ರತಾ ಲೋಪದಿಂದ ಒಂದು ವೇಳೆ ಏನಾದರೂ ಅವಘಡ ಸಂಭವಿಸಿದರೆ, ಅದಕ್ಕೆ ಯಾರು ಹೊಣೆ?
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…