ಜೂನ್ ತಿಂಗಳಿನಲ್ಲಿಯೇ ಉತ್ತಮ ಮಳೆಯಾಗಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೃಷ್ಣರಾಜಸಾಗರ (ಕೆ ಆರ್ಎಸ್) ಅಣೆಕಟ್ಟೆ ಭರ್ತಿಯಾಗಿದೆ. ಜಲಾಶಯದ ಹಿನ್ನೀರನ್ನು ವೀಕ್ಷಿಸಲು ಆಗಮಿಸುವ ಪ್ರವಾಸಿಗರು ಸೆಲಿ ತೆಗೆದುಕೊಳ್ಳಲು ಮುಗಿ ಬೀಳುತ್ತಿದ್ದು, ವ್ಯಕ್ತಿಯೊಬ್ಬರು ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆಯೂ ನಡೆದಿದೆ.
ಆದ್ದರಿಂದ ಸಂಬಂಧಪಟ್ಟ ಅಧೀಕಾರಿಗಳು ಕೆಆರ್ಎಸ್ ಜಲಾ ಶಯದ ಹಿನ್ನೀರಿನಲ್ಲಿ ಪ್ರವಾಸಿಗರಿಗೆ ಫೋಟೋ, ಸೆಲ್ಫಿ ತೆಗೆದುಕೊಳ್ಳುವುದು ಹಾಗೂ ರೀಲ್ಸ್ ಮಾಡುವುದನ್ನು ನಿರ್ಬಂಧಿಸುವುದರೊಂದಿಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಸೂಕ್ತ ಭದ್ರತೆಯನ್ನು ಕಲ್ಪಿಸಬೇಕಾಗಿದೆ.
– ನಾಗೇಶ್, ಮಾನಸಗಂಗೋತ್ರಿ, ಮೈಸೂರು





