Andolana originals

ಓದುಗರ ಪತ್ರ: ಹೆಣ್ಣು ಮಕ್ಕಳಿಗೆ ಭದ್ರತೆ ಒದಗಿಸಿ

ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಮಾನಸಗಂಗೋತ್ರಿ ಆವರಣದಲ್ಲಿ ನಡೆದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಮದ್ಯವ್ಯಸನಿಗಳು ಹೆಣ್ಣು ಮಕ್ಕಳಿಗೆ ಮುಜುಗರವಾಗುವಂತೆ ವರ್ತಿಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ‘ಆಂದೋಲನ’ ದಿನಪತ್ರಿಕೆಯಲ್ಲಿ ಅಂಬಿಕ ಎಂಬವವರು ಬರೆದ ಓದುಗರ ಪತ್ರವೊಂದು ಅ.1ರಂದು ಪ್ರಕಟಗೊಂಡಿದೆ. ಇದು ಅಕ್ಷರಶಃ ಸತ್ಯ. ತಡರಾತ್ರಿಯವರೆಗೂ ನಡೆಯುತ್ತಿದ್ದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಸಾಕಷ್ಟು ಯುವತಿಯರು ಪಾಲ್ಗೊಂಡು ಕುಣಿದು ಕುಪ್ಪಳಿಸಿದರು. ಆದರೆ ಈ ಕಾರ್ಯಕ್ರಮಕ್ಕೆ ಕೆಲ ಮದ್ಯವ್ಯಸನಿಗಳು ಬಂದು ಹೆಣ್ಣುಮಕ್ಕಳಿರುವ ಕಡೆ ಅಸಭ್ಯವಾಗಿ ವರ್ತಿಸುವುದಲ್ಲದೇ, ಅವರಿಗೆ ಮುಜುಗರವಾಗುವಂತೆ ನಡೆದುಕೊಂಡಿದ್ದಾರೆ. ಇದನ್ನು ಸಾಕಷ್ಟು ಬಾರಿ ನಾನೂ ಗಮನಿಸಿದ್ದೇನೆ. ಇನ್ನು ಕೆಲವರು ಗಂಗೋತ್ರಿ ಆವರಣದಲ್ಲಿ ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡುವುದು, ಗಿಡಮರಗಳನ್ನು ಕೀಳುವ ಕೆಲಸವನ್ನೂ ಮಾಡಿದ್ದಾರೆ. ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಇಷ್ಟೊಂದು ಪೊಲೀಸ್ ಬಂದೋಬಸ್ತ್ ಇದ್ದರೂ ಹೆಣ್ಣು ಮಕ್ಕಳಿಗೆ ಸೂಕ್ತ ಭದ್ರತೆ ಇಲ್ಲ ಎಂದಾದರೆ ನಗರದ ಹೊರ ಭಾಗದಲ್ಲಿ ಆಯೋಜನೆಗೊಂಡಿರುವ ‘ಯುವ ದಸರಾ’ದ ಕಾರ್ಯಕ್ರಮಗಳಿಗೆ ಹಣ್ಣು ಮಕ್ಕಳು ಹೋಗುವುದಾದರೂ ಹೇಗೆ? ಈಗಾಗಲೇ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಹಿಳೆಯರು ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ಆದಾಗ್ಯೂ ಈ ಬಾರಿ ಬೆಟ್ಟದ ತಪ್ಪಲಿನ ಉತ್ತನಹಳ್ಳಿ ಸಮೀಪ ಯುವ ದಸರಾ ಕಾರ್ಯಕ್ರಮಗಳನ್ನು ನಡೆಸಲು ಸಿದ್ಧತೆ ಮಾಡಿಕೊಂಡಿದ್ದು, ಪೊಲೀಸ್ ಇಲಾಖೆಯು ಕಾರ್ಯಕ್ರಮಕ್ಕೆ ಬರುವವರನ್ನು ತಪಾಸಣೆ ಮಾಡುವ ಮೂಲಕ ಮದ್ಯವ್ಯಸನಿಗಳ ಹಾವಳಿಗೆ ಕಡಿವಾಣ ಹಾಕುವ ಜತೆಗೆ ಹೆಣ್ಣು ಮಕ್ಕಳಿಗೆ ಸೂಕ್ತ ಭದ್ರತೆ ಒದಗಿಸಬೇಕಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು,

 

ಆಂದೋಲನ ಡೆಸ್ಕ್

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago