Andolana originals

ಓದುಗರ ಪತ್ರ: ಹೆಣ್ಣು ಮಕ್ಕಳಿಗೆ ಭದ್ರತೆ ಒದಗಿಸಿ

ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಮಾನಸಗಂಗೋತ್ರಿ ಆವರಣದಲ್ಲಿ ನಡೆದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಮದ್ಯವ್ಯಸನಿಗಳು ಹೆಣ್ಣು ಮಕ್ಕಳಿಗೆ ಮುಜುಗರವಾಗುವಂತೆ ವರ್ತಿಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ‘ಆಂದೋಲನ’ ದಿನಪತ್ರಿಕೆಯಲ್ಲಿ ಅಂಬಿಕ ಎಂಬವವರು ಬರೆದ ಓದುಗರ ಪತ್ರವೊಂದು ಅ.1ರಂದು ಪ್ರಕಟಗೊಂಡಿದೆ. ಇದು ಅಕ್ಷರಶಃ ಸತ್ಯ. ತಡರಾತ್ರಿಯವರೆಗೂ ನಡೆಯುತ್ತಿದ್ದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಸಾಕಷ್ಟು ಯುವತಿಯರು ಪಾಲ್ಗೊಂಡು ಕುಣಿದು ಕುಪ್ಪಳಿಸಿದರು. ಆದರೆ ಈ ಕಾರ್ಯಕ್ರಮಕ್ಕೆ ಕೆಲ ಮದ್ಯವ್ಯಸನಿಗಳು ಬಂದು ಹೆಣ್ಣುಮಕ್ಕಳಿರುವ ಕಡೆ ಅಸಭ್ಯವಾಗಿ ವರ್ತಿಸುವುದಲ್ಲದೇ, ಅವರಿಗೆ ಮುಜುಗರವಾಗುವಂತೆ ನಡೆದುಕೊಂಡಿದ್ದಾರೆ. ಇದನ್ನು ಸಾಕಷ್ಟು ಬಾರಿ ನಾನೂ ಗಮನಿಸಿದ್ದೇನೆ. ಇನ್ನು ಕೆಲವರು ಗಂಗೋತ್ರಿ ಆವರಣದಲ್ಲಿ ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡುವುದು, ಗಿಡಮರಗಳನ್ನು ಕೀಳುವ ಕೆಲಸವನ್ನೂ ಮಾಡಿದ್ದಾರೆ. ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಇಷ್ಟೊಂದು ಪೊಲೀಸ್ ಬಂದೋಬಸ್ತ್ ಇದ್ದರೂ ಹೆಣ್ಣು ಮಕ್ಕಳಿಗೆ ಸೂಕ್ತ ಭದ್ರತೆ ಇಲ್ಲ ಎಂದಾದರೆ ನಗರದ ಹೊರ ಭಾಗದಲ್ಲಿ ಆಯೋಜನೆಗೊಂಡಿರುವ ‘ಯುವ ದಸರಾ’ದ ಕಾರ್ಯಕ್ರಮಗಳಿಗೆ ಹಣ್ಣು ಮಕ್ಕಳು ಹೋಗುವುದಾದರೂ ಹೇಗೆ? ಈಗಾಗಲೇ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಹಿಳೆಯರು ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ಆದಾಗ್ಯೂ ಈ ಬಾರಿ ಬೆಟ್ಟದ ತಪ್ಪಲಿನ ಉತ್ತನಹಳ್ಳಿ ಸಮೀಪ ಯುವ ದಸರಾ ಕಾರ್ಯಕ್ರಮಗಳನ್ನು ನಡೆಸಲು ಸಿದ್ಧತೆ ಮಾಡಿಕೊಂಡಿದ್ದು, ಪೊಲೀಸ್ ಇಲಾಖೆಯು ಕಾರ್ಯಕ್ರಮಕ್ಕೆ ಬರುವವರನ್ನು ತಪಾಸಣೆ ಮಾಡುವ ಮೂಲಕ ಮದ್ಯವ್ಯಸನಿಗಳ ಹಾವಳಿಗೆ ಕಡಿವಾಣ ಹಾಕುವ ಜತೆಗೆ ಹೆಣ್ಣು ಮಕ್ಕಳಿಗೆ ಸೂಕ್ತ ಭದ್ರತೆ ಒದಗಿಸಬೇಕಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು,

 

ಆಂದೋಲನ ಡೆಸ್ಕ್

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

5 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

5 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

6 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

7 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

7 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

7 hours ago