Andolana originals

ಓದುಗರ ಪತ್ರ: ಹೆಣ್ಣು ಮಕ್ಕಳಿಗೆ ಭದ್ರತೆ ಒದಗಿಸಿ

ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಮಾನಸಗಂಗೋತ್ರಿ ಆವರಣದಲ್ಲಿ ನಡೆದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಮದ್ಯವ್ಯಸನಿಗಳು ಹೆಣ್ಣು ಮಕ್ಕಳಿಗೆ ಮುಜುಗರವಾಗುವಂತೆ ವರ್ತಿಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ‘ಆಂದೋಲನ’ ದಿನಪತ್ರಿಕೆಯಲ್ಲಿ ಅಂಬಿಕ ಎಂಬವವರು ಬರೆದ ಓದುಗರ ಪತ್ರವೊಂದು ಅ.1ರಂದು ಪ್ರಕಟಗೊಂಡಿದೆ. ಇದು ಅಕ್ಷರಶಃ ಸತ್ಯ. ತಡರಾತ್ರಿಯವರೆಗೂ ನಡೆಯುತ್ತಿದ್ದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಸಾಕಷ್ಟು ಯುವತಿಯರು ಪಾಲ್ಗೊಂಡು ಕುಣಿದು ಕುಪ್ಪಳಿಸಿದರು. ಆದರೆ ಈ ಕಾರ್ಯಕ್ರಮಕ್ಕೆ ಕೆಲ ಮದ್ಯವ್ಯಸನಿಗಳು ಬಂದು ಹೆಣ್ಣುಮಕ್ಕಳಿರುವ ಕಡೆ ಅಸಭ್ಯವಾಗಿ ವರ್ತಿಸುವುದಲ್ಲದೇ, ಅವರಿಗೆ ಮುಜುಗರವಾಗುವಂತೆ ನಡೆದುಕೊಂಡಿದ್ದಾರೆ. ಇದನ್ನು ಸಾಕಷ್ಟು ಬಾರಿ ನಾನೂ ಗಮನಿಸಿದ್ದೇನೆ. ಇನ್ನು ಕೆಲವರು ಗಂಗೋತ್ರಿ ಆವರಣದಲ್ಲಿ ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡುವುದು, ಗಿಡಮರಗಳನ್ನು ಕೀಳುವ ಕೆಲಸವನ್ನೂ ಮಾಡಿದ್ದಾರೆ. ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಇಷ್ಟೊಂದು ಪೊಲೀಸ್ ಬಂದೋಬಸ್ತ್ ಇದ್ದರೂ ಹೆಣ್ಣು ಮಕ್ಕಳಿಗೆ ಸೂಕ್ತ ಭದ್ರತೆ ಇಲ್ಲ ಎಂದಾದರೆ ನಗರದ ಹೊರ ಭಾಗದಲ್ಲಿ ಆಯೋಜನೆಗೊಂಡಿರುವ ‘ಯುವ ದಸರಾ’ದ ಕಾರ್ಯಕ್ರಮಗಳಿಗೆ ಹಣ್ಣು ಮಕ್ಕಳು ಹೋಗುವುದಾದರೂ ಹೇಗೆ? ಈಗಾಗಲೇ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಹಿಳೆಯರು ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ಆದಾಗ್ಯೂ ಈ ಬಾರಿ ಬೆಟ್ಟದ ತಪ್ಪಲಿನ ಉತ್ತನಹಳ್ಳಿ ಸಮೀಪ ಯುವ ದಸರಾ ಕಾರ್ಯಕ್ರಮಗಳನ್ನು ನಡೆಸಲು ಸಿದ್ಧತೆ ಮಾಡಿಕೊಂಡಿದ್ದು, ಪೊಲೀಸ್ ಇಲಾಖೆಯು ಕಾರ್ಯಕ್ರಮಕ್ಕೆ ಬರುವವರನ್ನು ತಪಾಸಣೆ ಮಾಡುವ ಮೂಲಕ ಮದ್ಯವ್ಯಸನಿಗಳ ಹಾವಳಿಗೆ ಕಡಿವಾಣ ಹಾಕುವ ಜತೆಗೆ ಹೆಣ್ಣು ಮಕ್ಕಳಿಗೆ ಸೂಕ್ತ ಭದ್ರತೆ ಒದಗಿಸಬೇಕಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು,

 

ಆಂದೋಲನ ಡೆಸ್ಕ್

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

3 hours ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

4 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

5 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

5 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

6 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

8 hours ago