Andolana originals

ಓದುಗರ ಪತ್ರ: ಹೆಣ್ಣು ಮಕ್ಕಳಿಗೆ ಭದ್ರತೆ ಒದಗಿಸಿ

ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಮಾನಸಗಂಗೋತ್ರಿ ಆವರಣದಲ್ಲಿ ನಡೆದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಮದ್ಯವ್ಯಸನಿಗಳು ಹೆಣ್ಣು ಮಕ್ಕಳಿಗೆ ಮುಜುಗರವಾಗುವಂತೆ ವರ್ತಿಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ‘ಆಂದೋಲನ’ ದಿನಪತ್ರಿಕೆಯಲ್ಲಿ ಅಂಬಿಕ ಎಂಬವವರು ಬರೆದ ಓದುಗರ ಪತ್ರವೊಂದು ಅ.1ರಂದು ಪ್ರಕಟಗೊಂಡಿದೆ. ಇದು ಅಕ್ಷರಶಃ ಸತ್ಯ. ತಡರಾತ್ರಿಯವರೆಗೂ ನಡೆಯುತ್ತಿದ್ದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಸಾಕಷ್ಟು ಯುವತಿಯರು ಪಾಲ್ಗೊಂಡು ಕುಣಿದು ಕುಪ್ಪಳಿಸಿದರು. ಆದರೆ ಈ ಕಾರ್ಯಕ್ರಮಕ್ಕೆ ಕೆಲ ಮದ್ಯವ್ಯಸನಿಗಳು ಬಂದು ಹೆಣ್ಣುಮಕ್ಕಳಿರುವ ಕಡೆ ಅಸಭ್ಯವಾಗಿ ವರ್ತಿಸುವುದಲ್ಲದೇ, ಅವರಿಗೆ ಮುಜುಗರವಾಗುವಂತೆ ನಡೆದುಕೊಂಡಿದ್ದಾರೆ. ಇದನ್ನು ಸಾಕಷ್ಟು ಬಾರಿ ನಾನೂ ಗಮನಿಸಿದ್ದೇನೆ. ಇನ್ನು ಕೆಲವರು ಗಂಗೋತ್ರಿ ಆವರಣದಲ್ಲಿ ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡುವುದು, ಗಿಡಮರಗಳನ್ನು ಕೀಳುವ ಕೆಲಸವನ್ನೂ ಮಾಡಿದ್ದಾರೆ. ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಇಷ್ಟೊಂದು ಪೊಲೀಸ್ ಬಂದೋಬಸ್ತ್ ಇದ್ದರೂ ಹೆಣ್ಣು ಮಕ್ಕಳಿಗೆ ಸೂಕ್ತ ಭದ್ರತೆ ಇಲ್ಲ ಎಂದಾದರೆ ನಗರದ ಹೊರ ಭಾಗದಲ್ಲಿ ಆಯೋಜನೆಗೊಂಡಿರುವ ‘ಯುವ ದಸರಾ’ದ ಕಾರ್ಯಕ್ರಮಗಳಿಗೆ ಹಣ್ಣು ಮಕ್ಕಳು ಹೋಗುವುದಾದರೂ ಹೇಗೆ? ಈಗಾಗಲೇ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಹಿಳೆಯರು ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ಆದಾಗ್ಯೂ ಈ ಬಾರಿ ಬೆಟ್ಟದ ತಪ್ಪಲಿನ ಉತ್ತನಹಳ್ಳಿ ಸಮೀಪ ಯುವ ದಸರಾ ಕಾರ್ಯಕ್ರಮಗಳನ್ನು ನಡೆಸಲು ಸಿದ್ಧತೆ ಮಾಡಿಕೊಂಡಿದ್ದು, ಪೊಲೀಸ್ ಇಲಾಖೆಯು ಕಾರ್ಯಕ್ರಮಕ್ಕೆ ಬರುವವರನ್ನು ತಪಾಸಣೆ ಮಾಡುವ ಮೂಲಕ ಮದ್ಯವ್ಯಸನಿಗಳ ಹಾವಳಿಗೆ ಕಡಿವಾಣ ಹಾಕುವ ಜತೆಗೆ ಹೆಣ್ಣು ಮಕ್ಕಳಿಗೆ ಸೂಕ್ತ ಭದ್ರತೆ ಒದಗಿಸಬೇಕಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು,

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

35 mins ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

36 mins ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

39 mins ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

41 mins ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

49 mins ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

55 mins ago