ಓದುಗರ ಪತ್ರ
ತಾಳಗುಪ್ಪದಿಂದ ಶಿವಮೊಗ್ಗ ಮಾರ್ಗವಾಗಿ ಮೈಸೂರಿಗೆ ಬರುವ ಇಂಟರ್ಸಿಟಿ ಎಕ್ಸ್ಪ್ರೆಸ್ (೧೬೨೦೫) ರೈಲಿನಲ್ಲಿ ನೀರಿಲ್ಲದೇ ಪ್ರಯಾಣಿಕರು ಪರದಾಡಿದರು. ಈ ರೈಲಿನಲ್ಲಿ ಎದುರಾದ ಅವ್ಯವಸ್ಥೆ ಕಂಡು ಬೇಸರವಾಯಿತು. ಹಳೆಯ ಕಾಲದ ಬೋಗಿಗಳು. ಇಲ್ಲಿರುವ ಶೌಚಾಲಯಗಳಲ್ಲಿ ಕೆಲವಕ್ಕೆ ದೀಪದ ವ್ಯವಸ್ಥೆಯಿಲ್ಲ, ಶೌಚಕ್ಕೆ ಹೋದನಂತರ ಫ್ಲೆಶ್ ಮಾಡಲು ಒತ್ತುವ ಬಟನ್ ಕಾರ್ಯನಿರ್ವಹಿಸುತ್ತಿಲ್ಲ. ಮುಖ್ಯವಾಗಿ ನೀರೇ ಇಲ್ಲದೇ ಪ್ರಯಾಣಿಕರು ಪರದಾಡುವಂತಾಯಿತು. ತಾಳಗುಪ್ಪದಲ್ಲೇ ರೈಲಿಗೆ ನೀರು ತುಂಬಿಸಬೇಕಿತ್ತು. ಇಲ್ಲವಾದರೆ ಶಿವಮೊಗ್ಗದಲ್ಲಿ ನೀರು ತುಂಬಿಸಬೇಕಿತ್ತು. ಆದರೆ ನೀರು ತುಂಬಿಸಿಲ್ಲದ ಕಾರಣ ಶಿವಮೊಗ್ಗದಿಂದ ಮೈಸೂರಿಗೆ ಬರುವವರೆಗೂ ಕೈತೊಳೆಯಲು ಹಾಗೂ ಶೌಚಕ್ಕೆ ಹೋಗಲು ನೀರಿಲ್ಲದೆ ಪ್ರಯಾಣಿಕರು ಸಂಕಟ ಅನುಭವಿಸಿದರು. ರೈಲಿನಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಾಗಿ ಪ್ರಯಾಣಿಸುತ್ತಾರೆ. ಪ್ರಯಾಣದ ಅವಽ ೫ ಗಂಟೆಗಳಿಗೂ ಹೆಚ್ಚು ಕಾಲ ಆಗಿರುವುದರಿಂದ ಶೌಚಾಲಯಕ್ಕೆ ಹೋಗುವುದು ಅನಿವಾರ್ಯವಾಗುತ್ತದೆ. ರೈಲಿನ ಅವ್ಯವಸ್ಥೆಯಿಂದಾಗಿ ಶಿವಮೊಗ್ಗದಲ್ಲಿ ರೈಲು ಹತ್ತಿದವರು ಶೌಚಕ್ಕೆ ತೆರಳಲು ಮೈಸೂರು ರೈಲು ನಿಲ್ದಾಣಕ್ಕೆ ಬರಬೇಕಾದ ಪರಿಸ್ಥಿತಿಯಿದೆ. ಬೆಂಗಳೂರು- ಶಿವಮೊಗ್ಗ ನಡುವೆ ಸಂಚರಿಸುವ ರೈಲುಗಳಿಗೆ ಹೊಸ ಬೋಗಿಗಳು ಸೇರಿದಂತೆ ಸಕಲ ಸೌಲಭ್ಯವನ್ನೂ ಕಲ್ಪಿಸಲಾಗಿದೆ. ಆದರೆ ಮೈಸೂರು ವಿಭಾಗದಿಂದ ಹೊರಡುವ ರೈಲುಗಳಲ್ಲಿ ಅವ್ಯವಸ್ಥೆ ಹೆಚ್ಚಾಗಿದೆ. ಪ್ರಯಾಣಿಕರು ಯಾಕಾದರೂ ಈ ರೈಲಿನಲ್ಲಿ ಪ್ರಯಾಣಿಸುತ್ತಿದ್ದೇವೋ ಎಂದು ಬೇಸರ ಪಟ್ಟುಕೊಳ್ಳುವಂತಾಗಿದೆ. ಮೈಸೂರು ವಿಭಾಗೀಯ ರೈಲ್ವೆ ಅಧಿಕಾರಿಗಳು ರೈಲಿನಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಿದೆ.
-ಎಸ್.ಶ್ರೀದೇವಿ, ಮೈಸೂರು
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…