Andolana originals

ಓದುಗರ ಪತ್ರ: ರೈಲಿನಲ್ಲಿ ನೀರಿನ ವ್ಯವಸ್ಥೆ ಕಲ್ಪಿಸಿ

ತಾಳಗುಪ್ಪದಿಂದ ಶಿವಮೊಗ್ಗ ಮಾರ್ಗವಾಗಿ ಮೈಸೂರಿಗೆ ಬರುವ ಇಂಟರ್‌ಸಿಟಿ ಎಕ್ಸ್‌ಪ್ರೆಸ್ (೧೬೨೦೫) ರೈಲಿನಲ್ಲಿ ನೀರಿಲ್ಲದೇ ಪ್ರಯಾಣಿಕರು ಪರದಾಡಿದರು. ಈ ರೈಲಿನಲ್ಲಿ ಎದುರಾದ ಅವ್ಯವಸ್ಥೆ ಕಂಡು ಬೇಸರವಾಯಿತು. ಹಳೆಯ ಕಾಲದ ಬೋಗಿಗಳು. ಇಲ್ಲಿರುವ ಶೌಚಾಲಯಗಳಲ್ಲಿ ಕೆಲವಕ್ಕೆ ದೀಪದ ವ್ಯವಸ್ಥೆಯಿಲ್ಲ, ಶೌಚಕ್ಕೆ ಹೋದನಂತರ ಫ್ಲೆಶ್ ಮಾಡಲು ಒತ್ತುವ ಬಟನ್ ಕಾರ್ಯನಿರ್ವಹಿಸುತ್ತಿಲ್ಲ. ಮುಖ್ಯವಾಗಿ ನೀರೇ ಇಲ್ಲದೇ ಪ್ರಯಾಣಿಕರು ಪರದಾಡುವಂತಾಯಿತು. ತಾಳಗುಪ್ಪದಲ್ಲೇ ರೈಲಿಗೆ ನೀರು ತುಂಬಿಸಬೇಕಿತ್ತು. ಇಲ್ಲವಾದರೆ ಶಿವಮೊಗ್ಗದಲ್ಲಿ ನೀರು ತುಂಬಿಸಬೇಕಿತ್ತು. ಆದರೆ ನೀರು ತುಂಬಿಸಿಲ್ಲದ ಕಾರಣ ಶಿವಮೊಗ್ಗದಿಂದ ಮೈಸೂರಿಗೆ ಬರುವವರೆಗೂ ಕೈತೊಳೆಯಲು ಹಾಗೂ ಶೌಚಕ್ಕೆ ಹೋಗಲು ನೀರಿಲ್ಲದೆ ಪ್ರಯಾಣಿಕರು ಸಂಕಟ ಅನುಭವಿಸಿದರು. ರೈಲಿನಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಾಗಿ ಪ್ರಯಾಣಿಸುತ್ತಾರೆ. ಪ್ರಯಾಣದ ಅವಽ ೫ ಗಂಟೆಗಳಿಗೂ ಹೆಚ್ಚು ಕಾಲ ಆಗಿರುವುದರಿಂದ ಶೌಚಾಲಯಕ್ಕೆ ಹೋಗುವುದು ಅನಿವಾರ್ಯವಾಗುತ್ತದೆ. ರೈಲಿನ ಅವ್ಯವಸ್ಥೆಯಿಂದಾಗಿ ಶಿವಮೊಗ್ಗದಲ್ಲಿ ರೈಲು ಹತ್ತಿದವರು ಶೌಚಕ್ಕೆ ತೆರಳಲು ಮೈಸೂರು ರೈಲು ನಿಲ್ದಾಣಕ್ಕೆ ಬರಬೇಕಾದ ಪರಿಸ್ಥಿತಿಯಿದೆ. ಬೆಂಗಳೂರು- ಶಿವಮೊಗ್ಗ ನಡುವೆ ಸಂಚರಿಸುವ ರೈಲುಗಳಿಗೆ ಹೊಸ ಬೋಗಿಗಳು ಸೇರಿದಂತೆ ಸಕಲ ಸೌಲಭ್ಯವನ್ನೂ ಕಲ್ಪಿಸಲಾಗಿದೆ. ಆದರೆ ಮೈಸೂರು ವಿಭಾಗದಿಂದ ಹೊರಡುವ ರೈಲುಗಳಲ್ಲಿ ಅವ್ಯವಸ್ಥೆ ಹೆಚ್ಚಾಗಿದೆ. ಪ್ರಯಾಣಿಕರು ಯಾಕಾದರೂ ಈ ರೈಲಿನಲ್ಲಿ ಪ್ರಯಾಣಿಸುತ್ತಿದ್ದೇವೋ ಎಂದು ಬೇಸರ ಪಟ್ಟುಕೊಳ್ಳುವಂತಾಗಿದೆ. ಮೈಸೂರು ವಿಭಾಗೀಯ ರೈಲ್ವೆ ಅಧಿಕಾರಿಗಳು ರೈಲಿನಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಿದೆ.

-ಎಸ್.ಶ್ರೀದೇವಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಸಂಚು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…

12 hours ago

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು…

12 hours ago

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

13 hours ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

14 hours ago

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…

14 hours ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

16 hours ago