Andolana originals

ಓದುಗರ ಪತ್ರ: 365 ದಿನಗಳೂ ಸಾರ್ವಜನಿಕ ಗ್ರಂಥಾಲಯಗಳ ಸೇವೆ ಲಭ್ಯವಿರಲಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.

ಇದೊಂದು ರಾಜ್ಯ ಸರ್ಕಾರದ ದಿಟ್ಟ ಹೆಜ್ಜೆ. ಇದರಿಂದಾಗಿ ಸಾವಿರಾರು ಬಡ ವರ್ಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ಅನುಕೂಲವಾಗುತ್ತದೆ. ಹಲವಾರು ತಳಸಮುದಾಯಗಳ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಲು ಕನಿಷ್ಠ ಸೌಲಭ್ಯಗಳೂ ಇರುವುದಿಲ್ಲ, ಇಂತಹ ವಿದ್ಯಾರ್ಥಿಗಳಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ.

ಮುಖ್ಯವಾಗಿ ರಾಜ್ಯದ ಸಾರ್ವಜನಿಕರ ಗ್ರಂಥಾಲಯದ ಸೇವೆಯನ್ನು, ಅಗತ್ಯ ಸೇವಾ ವಲಯ ಎಂದು ಪರಿಗಣಿಸ ಬೇಕು. ಏಕೆಂದರೆ ಸಾರ್ವಜನಿಕ ಗ್ರಂಥಾಲಯಗಳು ಪ್ರತಿ ಸೋಮವಾರ, ತಿಂಗಳ ಎರಡನೇ ಮಂಗಳವಾರ, ನಾಲ್ಕನೇ ಶನಿವಾರ ಹಾಗೂ ಸರ್ಕಾರಿ ರಜೆ ದಿನಗಳೂ ಸೇರಿದಂತೆ ವರ್ಷದಲ್ಲಿ ಸುಮಾರು ೧೦೦ ದಿನಗಳ ಕಾಲ ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ. ಎಲ್ಲ ಸಾರ್ವಜನಿಕ ಗ್ರಂಥಾಲಯಗಳು ವರ್ಷದ ೩೬೫ ದಿನಗಳೂ ತೆರೆದು ಸಾರ್ವಜನಿಕರ ಸೇವೆಗೆ ಲಭ್ಯವಾಗುವಂತೆ ಸಚಿವರು ಕ್ರಮ ಕೈಗೊಳ್ಳಬೇಕು.

– ಬೂಕನಕೆರೆ ವಿಜೇಂದ್ರ, ಮೈಸೂರು.

 

ಆಂದೋಲನ ಡೆಸ್ಕ್

Recent Posts

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

6 mins ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

14 mins ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

15 mins ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

17 mins ago

ಯುವಜನರ ಕೈಯಲ್ಲಿ ಮೊಬೈಲ್ ಇದೆ; ದಿಕ್ಕು ಇದೆಯೇ?

ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ…

21 mins ago

ಕಾಯಿಗಟ್ಟುವ ಸಮಯದಲ್ಲೇ ಹಣ್ಣಾಗುತ್ತಿರುವ ಅರೆಬಿಕಾ ಕಾಫಿ

ಲಕ್ಷ್ಮಿಕಾಂತ್ ಕೊಮಾರಪ್ಪ ಹವಾಮಾನ ವೈಪರೀತ್ಯದಿಂದ ಬೆಳೆಗಾರರಿಗೆ ಹೊಸ ಸಂಕಷ್ಟ; ಕೊಯ್ಲು, ಪಲ್ಪಿಂಗ್ ಜೊತೆಗೆ ಒಣಗಿಸುವುದೂ ಸವಾಲು ಸೋಮವಾರಪೇಟೆ: ಕಾಫಿ ತೋಟಗಳಲ್ಲಿ…

28 mins ago