ಓದುಗರ ಪತ್ರ
ನಾಡಹಬ್ಬ ದಸರಾ ಉದ್ಘಾಟನಾ ಸಮಾರಂಭ ಅಧಿಕಾರಿಗಳು ಮತ್ತು ಕೆಲವು ಜನಪ್ರತಿನಿಧಿಗಳಿಗಷ್ಟೇ ಸಿಮೀತವಾಗಿತ್ತು. ಪೊಲೀಸ್ ಬಂದೋಬಸ್ತ್ ನಡುವೆ ಸಾಮಾನ್ಯ ಜನರಿಗೆ ಅವಕಾಶ ಕಲ್ಪಿಸದೆ ಉದ್ಘಾಟನೆ ನೆರವೇರಿಸಿದ್ದು, ಸಾರ್ವಜನಿಕರಿಗೆ ಮಾಡಿದ ಅವಮಾನವೆಂದೇ ಹೇಳಬೇಕು. ಸೋಮವಾರ ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಭಕ್ತಾದಿಗಳನ್ನು ಕುರುಬಾರಹಳ್ಳಿಯ ಸರ್ಕಲ್ನಲ್ಲೇ ತಡೆದು, ಪೊಲೀಸರು ವಾಪಸ್ ಕಳುಹಿಸಿದ್ದಾರೆ.
ಮೆಟ್ಟಿಲುಗಳಿಂದ ಬೆಟ್ಟ ಹತ್ತಿಕೊಂಡು ಹೋಗಿ ದೇವಿ ದರ್ಶನ ಮಾಡಲು ಮುಂದಾಗಿದ್ದ ಭಕ್ತರಿಗೂ ಅವಕಾಶ ನೀಡದೇ ಇದ್ದುದರಿಂದ ದೂರದ ಊರಿನಿಂದ ಬಂದಿದ್ದ ಭಕ್ತರು ಆಡಳಿತ ವ್ಯವಸ್ಥೆಗೆ ಹಿಡಿಶಾಪ ಹಾಕುವಂತಾಯಿತು. ಸಂಬಂಧಪಟ್ಟವರು ಇನ್ನು ಮುಂದಾದರೂ ದಸರಾ ಸಂಭ್ರಮದಲ್ಲಿ ಜನ ಸಾಮಾನ್ಯರನ್ನು ನಿರ್ಲಕ್ಷಿಸದಂತೆ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…
ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…
ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…
ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…
ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…