Andolana originals

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ ಎಂಬುದು ಇಂದಿನ ಮಕ್ಕಳಲ್ಲಿ ಅತೀ ವಿರಳವಾಗಿ ಕಂಡುಬರುತ್ತಿದೆ. ಸಮಯಕ್ಕೆ ಪ್ರಥಮ ಪ್ರಾಶಸ್ತ್ಯ ಕೊಟ್ಟವರು ಎಂದಿಗೂ ಸೋತ ಚರೀತ್ರೆಯೇ ಇಲ್ಲ.

ಆದರ್ಶ ನಾಯಕರು , ಸಾಧಿಸಿ ಅಮರರಾದ ಎಷ್ಟೋ ಮಂದಿ ಅಗ್ರಗಣ್ಯರು ಸಮಯವನ್ನು ತಮ್ಮ ಕೈಗನ್ನಡಿಯಾಗಿ ಮಾಡಿಕೊಂಡು ಅದನ್ನು ಪಾಲಿಸಿ ಸಾಧನೆಗೈದು ಇತಿಹಾಸದಲ್ಲಿ ತಮ್ಮ ಹೆಸರನ್ನು ಅಚ್ಚಳಿಯದಂತೆ ಮಾಡಿರುವುದನ್ನು ನಾವು ಹಲವು ಗ್ರಂಥಗಳಲ್ಲಿ ಓದುತ್ತೇವೆ.

ಅಂತಹವರ ಪೈಕಿ ನೈಜ ನಿದರ್ಶನ ಎಂದರೆ ಡಾ.ರಾಜೇಂದ್ರ ಪ್ರಸಾದ್ ರವರು ಶಿಸ್ತು, ಸಂಯಮ ಹಾಗೂ ಸಮಯ ಪಾಲನೆಗೆ ನೀಡಿದ ಪ್ರಾಶಸ್ತ್ಯಕ್ಕಾಗಿ ಭಾರತದ ಪ್ರಥಮ ರಾಷ್ಟ್ರಪತಿಗಳಾಗಿ ಜನಮಾನಸದಲ್ಲಿ ಇಂದೂ ಅಮರರಾಗಿ,ಆದರ್ಶರಾಗಿ ಉಳಿದಿದ್ದಾರೆ. ನಾವು ನಮ್ಮ ಜೀವನದ ದಿಕ್ಕನ್ನು ಉನ್ನತ ಪಥದತ್ತ ಕೊಂಡೆಯ್ಯಲು ಸಮಯ ಪಾಲನೆಯನ್ನು ಮಾಡುವುದು ಅಗತ್ಯವಲ್ಲವೇ?

ಬಾಲ್ಯದಲ್ಲಿಯೇ ಮಕ್ಕಳಿಗೆ ಸಮಯಪಾಲನೆಯ ಅರಿವು ಮಾಡಿಸುವುದು ಮುಖ್ಯ. ಪಾಲಕರು ತಮ್ಮ ಮಕ್ಕಳಿಗೆ ಸಮಯದ ಮಹತ್ವದ ಬಗ್ಗೆ ತಿಳಿಸಬೇಕು.

– ಅನಿಲ್ ರಾಜ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

4 mins ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

8 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

11 mins ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

19 mins ago

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

12 hours ago