Andolana originals

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ ಎಂಬುದು ಇಂದಿನ ಮಕ್ಕಳಲ್ಲಿ ಅತೀ ವಿರಳವಾಗಿ ಕಂಡುಬರುತ್ತಿದೆ. ಸಮಯಕ್ಕೆ ಪ್ರಥಮ ಪ್ರಾಶಸ್ತ್ಯ ಕೊಟ್ಟವರು ಎಂದಿಗೂ ಸೋತ ಚರೀತ್ರೆಯೇ ಇಲ್ಲ.

ಆದರ್ಶ ನಾಯಕರು , ಸಾಧಿಸಿ ಅಮರರಾದ ಎಷ್ಟೋ ಮಂದಿ ಅಗ್ರಗಣ್ಯರು ಸಮಯವನ್ನು ತಮ್ಮ ಕೈಗನ್ನಡಿಯಾಗಿ ಮಾಡಿಕೊಂಡು ಅದನ್ನು ಪಾಲಿಸಿ ಸಾಧನೆಗೈದು ಇತಿಹಾಸದಲ್ಲಿ ತಮ್ಮ ಹೆಸರನ್ನು ಅಚ್ಚಳಿಯದಂತೆ ಮಾಡಿರುವುದನ್ನು ನಾವು ಹಲವು ಗ್ರಂಥಗಳಲ್ಲಿ ಓದುತ್ತೇವೆ.

ಅಂತಹವರ ಪೈಕಿ ನೈಜ ನಿದರ್ಶನ ಎಂದರೆ ಡಾ.ರಾಜೇಂದ್ರ ಪ್ರಸಾದ್ ರವರು ಶಿಸ್ತು, ಸಂಯಮ ಹಾಗೂ ಸಮಯ ಪಾಲನೆಗೆ ನೀಡಿದ ಪ್ರಾಶಸ್ತ್ಯಕ್ಕಾಗಿ ಭಾರತದ ಪ್ರಥಮ ರಾಷ್ಟ್ರಪತಿಗಳಾಗಿ ಜನಮಾನಸದಲ್ಲಿ ಇಂದೂ ಅಮರರಾಗಿ,ಆದರ್ಶರಾಗಿ ಉಳಿದಿದ್ದಾರೆ. ನಾವು ನಮ್ಮ ಜೀವನದ ದಿಕ್ಕನ್ನು ಉನ್ನತ ಪಥದತ್ತ ಕೊಂಡೆಯ್ಯಲು ಸಮಯ ಪಾಲನೆಯನ್ನು ಮಾಡುವುದು ಅಗತ್ಯವಲ್ಲವೇ?

ಬಾಲ್ಯದಲ್ಲಿಯೇ ಮಕ್ಕಳಿಗೆ ಸಮಯಪಾಲನೆಯ ಅರಿವು ಮಾಡಿಸುವುದು ಮುಖ್ಯ. ಪಾಲಕರು ತಮ್ಮ ಮಕ್ಕಳಿಗೆ ಸಮಯದ ಮಹತ್ವದ ಬಗ್ಗೆ ತಿಳಿಸಬೇಕು.

– ಅನಿಲ್ ರಾಜ, ಮೈಸೂರು

 

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

2 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

2 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

2 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

2 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

2 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

2 hours ago