Andolana originals

ಓದುಗರ ಪತ್ರ: ಪಠ್ಯದಲ್ಲಿ ಪುನೀತ್ ಜೀವನಗಾಥೆ ಸೇರ್ಪಡೆ ಸಾಗತಾರ್ಹ

ಮುಂಬರುವ ಪಠ್ಯಪುಸ್ತಕ ತಯಾರಿ ಅಥವಾ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ನಟ ಪುನೀತ್ ರಾಜ್‌ಕುಮಾರ್ ಅವರ ಜೀವನ ಮತ್ತು ಸಾಧನೆಗಳ ಕುರಿತ ವಿಷಯಗಳನ್ನು ಸೇರಿಸುವ ಪ್ರಸ್ತಾಪವನ್ನು ಪರಿಗಣಿಸುವುದಾಗಿ ಕರ್ನಾಟಕ ಪಠ್ಯಪುಸ್ತಕ ಸೊಸೈಟಿ ದೃಢಪಡಿಸಿರುವುದು ಸ್ವಾಗತಾರ್ಹ. ಬಾಲನಟನಿಂದ ಲೋಕೋಪಕಾರಿ ಮತ್ತು ಮೌಲ್ಯಗಳಿಗೆ ಹೆಸರುವಾಸಿಯಾದ ಸಾಮಾಜಿಕ ಪ್ರಜ್ಞೆಯ ವ್ಯಕ್ತಿಯಾಗುವ ಅಸಾ ಧಾರಣ ವ್ಯಕ್ತಿತ್ವದ ಪಯಣ ಭವಿಷ್ಯದ ಪೀಳಿಗೆಗೆ ಸ್ಛೂರ್ತಿ ನೀಡುವ ರೀತಿ ಇದ್ದು, ಅದು ಮಕ್ಕಳಿಗೆ ಉತ್ತಮ ಅಧ್ಯಯನ ವಿಷಯವಾಗಿದೆ.

ಪುನೀತ್ ಅವರ ಜೀವನವು ಶಿಸ್ತು, ಶ್ರಮ, ಸರಳತೆ ಮತ್ತು ಮಾನವೀಯ ಮೌಲ್ಯಗಳ ಪ್ರತೀಕ. ಪುನೀತ್ ಅವರು ಭೌತಿಕವಾಗಿ ಇಲ್ಲವಾದರೂ ಅವರ ಸಾಧನೆ ಮತ್ತು ಮೌಲ್ಯಗಳು ಇಂದಿಗೂ ಕೋಟ್ಯಂತರ ಕನ್ನಡಿಗರಿಗೆ ಸೂರ್ತಿಯಾಗಿವೆ. ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ಅವರು ಸಿನಿಮಾ ಮಾತ್ರವಲ್ಲದೆ ಶಿಕ್ಷಣ, ಆರೋಗ್ಯ, ದಾನ ಕಾರ್ಯಗಳು ಹಾಗೂ ಸಮಾಜಮುಖಿ ಚಟುವಟಿಕೆಗಳ ಮೂಲಕವೂ ಜನಮನದಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದಾರೆ. ಒಟ್ಟಾರೆಯಾಗಿ ಅಪ್ಪು ಅವರ ಜೀವನ ಪಾಠಗಳು ಮುಂದಿನ ಪೀಳಿಗೆಯ ಮಕ್ಕಳಿಗೆ ದಾರಿದೀಪವಾಗಲಿ.

– ಹರಳಹಳ್ಳಿ ಪುಟ್ಟರಾಜು,ಪಾಂಡವಪುರ 

ಆಂದೋಲನ ಡೆಸ್ಕ್

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

6 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

7 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

7 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

7 hours ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

16 hours ago