Andolana originals

ಓದುಗರ ಪತ್ರ: ಪಠ್ಯದಲ್ಲಿ ಪುನೀತ್ ಜೀವನಗಾಥೆ ಸೇರ್ಪಡೆ ಸಾಗತಾರ್ಹ

ಮುಂಬರುವ ಪಠ್ಯಪುಸ್ತಕ ತಯಾರಿ ಅಥವಾ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ನಟ ಪುನೀತ್ ರಾಜ್‌ಕುಮಾರ್ ಅವರ ಜೀವನ ಮತ್ತು ಸಾಧನೆಗಳ ಕುರಿತ ವಿಷಯಗಳನ್ನು ಸೇರಿಸುವ ಪ್ರಸ್ತಾಪವನ್ನು ಪರಿಗಣಿಸುವುದಾಗಿ ಕರ್ನಾಟಕ ಪಠ್ಯಪುಸ್ತಕ ಸೊಸೈಟಿ ದೃಢಪಡಿಸಿರುವುದು ಸ್ವಾಗತಾರ್ಹ. ಬಾಲನಟನಿಂದ ಲೋಕೋಪಕಾರಿ ಮತ್ತು ಮೌಲ್ಯಗಳಿಗೆ ಹೆಸರುವಾಸಿಯಾದ ಸಾಮಾಜಿಕ ಪ್ರಜ್ಞೆಯ ವ್ಯಕ್ತಿಯಾಗುವ ಅಸಾ ಧಾರಣ ವ್ಯಕ್ತಿತ್ವದ ಪಯಣ ಭವಿಷ್ಯದ ಪೀಳಿಗೆಗೆ ಸ್ಛೂರ್ತಿ ನೀಡುವ ರೀತಿ ಇದ್ದು, ಅದು ಮಕ್ಕಳಿಗೆ ಉತ್ತಮ ಅಧ್ಯಯನ ವಿಷಯವಾಗಿದೆ.

ಪುನೀತ್ ಅವರ ಜೀವನವು ಶಿಸ್ತು, ಶ್ರಮ, ಸರಳತೆ ಮತ್ತು ಮಾನವೀಯ ಮೌಲ್ಯಗಳ ಪ್ರತೀಕ. ಪುನೀತ್ ಅವರು ಭೌತಿಕವಾಗಿ ಇಲ್ಲವಾದರೂ ಅವರ ಸಾಧನೆ ಮತ್ತು ಮೌಲ್ಯಗಳು ಇಂದಿಗೂ ಕೋಟ್ಯಂತರ ಕನ್ನಡಿಗರಿಗೆ ಸೂರ್ತಿಯಾಗಿವೆ. ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ಅವರು ಸಿನಿಮಾ ಮಾತ್ರವಲ್ಲದೆ ಶಿಕ್ಷಣ, ಆರೋಗ್ಯ, ದಾನ ಕಾರ್ಯಗಳು ಹಾಗೂ ಸಮಾಜಮುಖಿ ಚಟುವಟಿಕೆಗಳ ಮೂಲಕವೂ ಜನಮನದಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದಾರೆ. ಒಟ್ಟಾರೆಯಾಗಿ ಅಪ್ಪು ಅವರ ಜೀವನ ಪಾಠಗಳು ಮುಂದಿನ ಪೀಳಿಗೆಯ ಮಕ್ಕಳಿಗೆ ದಾರಿದೀಪವಾಗಲಿ.

– ಹರಳಹಳ್ಳಿ ಪುಟ್ಟರಾಜು,ಪಾಂಡವಪುರ 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

2 hours ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

2 hours ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

5 hours ago