Andolana originals

ಓದುಗರ ಪತ್ರ: ಪಠ್ಯದಲ್ಲಿ ಪುನೀತ್ ಜೀವನಗಾಥೆ ಸೇರ್ಪಡೆ ಸಾಗತಾರ್ಹ

ಮುಂಬರುವ ಪಠ್ಯಪುಸ್ತಕ ತಯಾರಿ ಅಥವಾ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ನಟ ಪುನೀತ್ ರಾಜ್‌ಕುಮಾರ್ ಅವರ ಜೀವನ ಮತ್ತು ಸಾಧನೆಗಳ ಕುರಿತ ವಿಷಯಗಳನ್ನು ಸೇರಿಸುವ ಪ್ರಸ್ತಾಪವನ್ನು ಪರಿಗಣಿಸುವುದಾಗಿ ಕರ್ನಾಟಕ ಪಠ್ಯಪುಸ್ತಕ ಸೊಸೈಟಿ ದೃಢಪಡಿಸಿರುವುದು ಸ್ವಾಗತಾರ್ಹ. ಬಾಲನಟನಿಂದ ಲೋಕೋಪಕಾರಿ ಮತ್ತು ಮೌಲ್ಯಗಳಿಗೆ ಹೆಸರುವಾಸಿಯಾದ ಸಾಮಾಜಿಕ ಪ್ರಜ್ಞೆಯ ವ್ಯಕ್ತಿಯಾಗುವ ಅಸಾ ಧಾರಣ ವ್ಯಕ್ತಿತ್ವದ ಪಯಣ ಭವಿಷ್ಯದ ಪೀಳಿಗೆಗೆ ಸ್ಛೂರ್ತಿ ನೀಡುವ ರೀತಿ ಇದ್ದು, ಅದು ಮಕ್ಕಳಿಗೆ ಉತ್ತಮ ಅಧ್ಯಯನ ವಿಷಯವಾಗಿದೆ.

ಪುನೀತ್ ಅವರ ಜೀವನವು ಶಿಸ್ತು, ಶ್ರಮ, ಸರಳತೆ ಮತ್ತು ಮಾನವೀಯ ಮೌಲ್ಯಗಳ ಪ್ರತೀಕ. ಪುನೀತ್ ಅವರು ಭೌತಿಕವಾಗಿ ಇಲ್ಲವಾದರೂ ಅವರ ಸಾಧನೆ ಮತ್ತು ಮೌಲ್ಯಗಳು ಇಂದಿಗೂ ಕೋಟ್ಯಂತರ ಕನ್ನಡಿಗರಿಗೆ ಸೂರ್ತಿಯಾಗಿವೆ. ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ಅವರು ಸಿನಿಮಾ ಮಾತ್ರವಲ್ಲದೆ ಶಿಕ್ಷಣ, ಆರೋಗ್ಯ, ದಾನ ಕಾರ್ಯಗಳು ಹಾಗೂ ಸಮಾಜಮುಖಿ ಚಟುವಟಿಕೆಗಳ ಮೂಲಕವೂ ಜನಮನದಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದಾರೆ. ಒಟ್ಟಾರೆಯಾಗಿ ಅಪ್ಪು ಅವರ ಜೀವನ ಪಾಠಗಳು ಮುಂದಿನ ಪೀಳಿಗೆಯ ಮಕ್ಕಳಿಗೆ ದಾರಿದೀಪವಾಗಲಿ.

– ಹರಳಹಳ್ಳಿ ಪುಟ್ಟರಾಜು,ಪಾಂಡವಪುರ 

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

4 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

4 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

5 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

6 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

7 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

7 hours ago