ಓದುಗರ ಪತ್ರ
ಮೈಸೂರು ದಸರಾ ಮಹೋತ್ಸವ ಆರಂಭವಾಗಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳ ಸಾವಿರಾರು ಜನರು ಪ್ರತಿನಿತ್ಯ ದಸರಾ ವೀಕ್ಷಣೆಗೆ ಮೈಸೂರಿಗೆ ಆಗಮಿಸುತ್ತಾರೆ. ನಗರದ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳಲು ಆಟೋಗಳನ್ನೇ ಅವಲಂಬಿಸಿ ದ್ದಾರೆ. ಆದರೆ ಇದನ್ನೇ ಬಂಡವಾಳವಾಗಿಸಿ ಕೊಂಡಿರುವ ಕೆಲವು ಆಟೋ ಚಾಲಕರು ಸಮೀಪದ ಸ್ಥಳಗಳಿಗೂ ೨೦೦ ರೂ. ಬಾಡಿಗೆ ಕೇಳುತ್ತಾರೆ. ಹೊರ ಊರಿನಿಂದ ಬಂದವರು ಅನಿವಾರ್ಯವಾಗಿ ಕೇಳಿದಷ್ಟು ಬಾಡಿಗೆ ನೀಡಿ ಸಂಚರಿಸುವಂತಾಗಿದೆ.
ಇದನ್ನೂ ಓದಿ :-ಕನ್ನಡದ ನೆಲದ ಕಾಡುವ ಕತೆ ಹೇಳುವ ‘ಕಹಾನಿ’
ಇನ್ನು ದಸರಾ ನಿಮಿತ್ತ ಪಂಜಿನ ಕವಾಯತು ನಡೆಯುವ ಬನ್ನಿಮಂಟಪದಲ್ಲಿರುವ ಕ್ರೀಡಾಂಗಣದಿಂದ ಕಾರ್ಯಕ್ರಮ ಮುಗಿದ ನಂತರ ಆಟೋ ಚಾಲಕರು ಮನಸೋ ಇಚ್ಛೆ ಹಣ ವಸೂಲಿ ಮಾಡುತ್ತಾರೆ. ಜನರು ಅನಿವಾರ್ಯವಾಗಿ ಕೇಳಿದಷ್ಟು ಹಣ ನೀಡಿ ಪ್ರಯಾಣಿಸಬೇಕಾಗಿದೆ. ಪೊಲೀಸ್ ಹಾಗೂ ಸಾರಿಗೆ ಇಲಾಖೆಯವರು ಆಟೋದವರಿಗೆ ಕಡ್ಡಾಯವಾಗಿ ಮೀಟರ್ ಹಾಕಿ ಅದರ ಪ್ರಕಾರವೇ ಬಾಡಿಗೆ ವಸೂಲಿ ಮಾಡಲು ಸೂಚನೆ ನೀಡಬೇಕು ಹಾಗೂ ಪ್ರಯಾಣಿಕರಿಂದ ಹೆಚ್ಚು ಹಣ ವಸೂಲಿ ಮಾಡುವ ಆಟೋ ಚಾಲಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
– ಸಂಗೀತಾ, ಮೈಸೂರು
ಸಿದ್ದಾಪುರ : ಕಾಡುಕೋಣ ಡಿಕ್ಕಿ ಹೊಡೆದ ಪರಿಣಾಮ ವಾಹನ ಪಲ್ಟಿಯಾದ ಘಟನೆ ಸಮೀಪದ ಕರಡಿಗೋಡು ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.…
ಬೆಂಗಳೂರು : ಇಂದಿನ ಯುವ ಜನಾಂಗದಲ್ಲಿ ಹೆಚ್ಚುತ್ತಿರುವ ರೀಲ್ಸ್ ಹುಚ್ಚನ್ನು ಎನ್ಕ್ಯಾಶ್ ಮಾಡಿಕೊಳ್ಳುವ ಹೊಸ ಐಡಿಯಾವನ್ನು ಮುಜರಾಯಿ ಇಲಾಖೆ ಕಂಡುಕೊಂಡಿದೆ.…
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ಪ್ರಮುಖ ದೂರುದಾರ ಮತ್ತು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು…
ಬೆಂಗಳೂರು : ಮುಂಬರುವ ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಾಗಲಿದ್ದು, ಪ್ರತಿ ಯೂನಿಟ್ಗೆ 12ರಿಂದ 15 ಪೈಸೆ ಹೆಚ್ಚುವರಿ ಶುಲ್ಕ…
ಮೈಸೂರು : ಸಂಘ ಸಂಸ್ಥೆ, ಸಂಘಟನೆಗಳು, ಸಾರ್ವಜನಿಕರು ಹಾಗೂ ಇತರರು ಸಾರ್ವಜನಿಕ ಪ್ರದೇಶದಲ್ಲಿ ಪ್ಲೇಕ್ಸ್ ಮತ್ತು ಬ್ಯಾನರ್ ಗಳನ್ನು ಅಳವಡಿಸಬೇಕಾದ್ದಲ್ಲಿ…
ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…