ಓದುಗರ ಪತ್ರ
ಮೈಸೂರು ದಸರಾ ಮಹೋತ್ಸವ ಆರಂಭವಾಗಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳ ಸಾವಿರಾರು ಜನರು ಪ್ರತಿನಿತ್ಯ ದಸರಾ ವೀಕ್ಷಣೆಗೆ ಮೈಸೂರಿಗೆ ಆಗಮಿಸುತ್ತಾರೆ. ನಗರದ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳಲು ಆಟೋಗಳನ್ನೇ ಅವಲಂಬಿಸಿ ದ್ದಾರೆ. ಆದರೆ ಇದನ್ನೇ ಬಂಡವಾಳವಾಗಿಸಿ ಕೊಂಡಿರುವ ಕೆಲವು ಆಟೋ ಚಾಲಕರು ಸಮೀಪದ ಸ್ಥಳಗಳಿಗೂ ೨೦೦ ರೂ. ಬಾಡಿಗೆ ಕೇಳುತ್ತಾರೆ. ಹೊರ ಊರಿನಿಂದ ಬಂದವರು ಅನಿವಾರ್ಯವಾಗಿ ಕೇಳಿದಷ್ಟು ಬಾಡಿಗೆ ನೀಡಿ ಸಂಚರಿಸುವಂತಾಗಿದೆ.
ಇದನ್ನೂ ಓದಿ :-ಕನ್ನಡದ ನೆಲದ ಕಾಡುವ ಕತೆ ಹೇಳುವ ‘ಕಹಾನಿ’
ಇನ್ನು ದಸರಾ ನಿಮಿತ್ತ ಪಂಜಿನ ಕವಾಯತು ನಡೆಯುವ ಬನ್ನಿಮಂಟಪದಲ್ಲಿರುವ ಕ್ರೀಡಾಂಗಣದಿಂದ ಕಾರ್ಯಕ್ರಮ ಮುಗಿದ ನಂತರ ಆಟೋ ಚಾಲಕರು ಮನಸೋ ಇಚ್ಛೆ ಹಣ ವಸೂಲಿ ಮಾಡುತ್ತಾರೆ. ಜನರು ಅನಿವಾರ್ಯವಾಗಿ ಕೇಳಿದಷ್ಟು ಹಣ ನೀಡಿ ಪ್ರಯಾಣಿಸಬೇಕಾಗಿದೆ. ಪೊಲೀಸ್ ಹಾಗೂ ಸಾರಿಗೆ ಇಲಾಖೆಯವರು ಆಟೋದವರಿಗೆ ಕಡ್ಡಾಯವಾಗಿ ಮೀಟರ್ ಹಾಕಿ ಅದರ ಪ್ರಕಾರವೇ ಬಾಡಿಗೆ ವಸೂಲಿ ಮಾಡಲು ಸೂಚನೆ ನೀಡಬೇಕು ಹಾಗೂ ಪ್ರಯಾಣಿಕರಿಂದ ಹೆಚ್ಚು ಹಣ ವಸೂಲಿ ಮಾಡುವ ಆಟೋ ಚಾಲಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
– ಸಂಗೀತಾ, ಮೈಸೂರು
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…