ಓದುಗರ ಪತ್ರ
ಮೈಸೂರು ದಸರಾ ಮಹೋತ್ಸವ ಆರಂಭವಾಗಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳ ಸಾವಿರಾರು ಜನರು ಪ್ರತಿನಿತ್ಯ ದಸರಾ ವೀಕ್ಷಣೆಗೆ ಮೈಸೂರಿಗೆ ಆಗಮಿಸುತ್ತಾರೆ. ನಗರದ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳಲು ಆಟೋಗಳನ್ನೇ ಅವಲಂಬಿಸಿ ದ್ದಾರೆ. ಆದರೆ ಇದನ್ನೇ ಬಂಡವಾಳವಾಗಿಸಿ ಕೊಂಡಿರುವ ಕೆಲವು ಆಟೋ ಚಾಲಕರು ಸಮೀಪದ ಸ್ಥಳಗಳಿಗೂ ೨೦೦ ರೂ. ಬಾಡಿಗೆ ಕೇಳುತ್ತಾರೆ. ಹೊರ ಊರಿನಿಂದ ಬಂದವರು ಅನಿವಾರ್ಯವಾಗಿ ಕೇಳಿದಷ್ಟು ಬಾಡಿಗೆ ನೀಡಿ ಸಂಚರಿಸುವಂತಾಗಿದೆ.
ಇದನ್ನೂ ಓದಿ :-ಕನ್ನಡದ ನೆಲದ ಕಾಡುವ ಕತೆ ಹೇಳುವ ‘ಕಹಾನಿ’
ಇನ್ನು ದಸರಾ ನಿಮಿತ್ತ ಪಂಜಿನ ಕವಾಯತು ನಡೆಯುವ ಬನ್ನಿಮಂಟಪದಲ್ಲಿರುವ ಕ್ರೀಡಾಂಗಣದಿಂದ ಕಾರ್ಯಕ್ರಮ ಮುಗಿದ ನಂತರ ಆಟೋ ಚಾಲಕರು ಮನಸೋ ಇಚ್ಛೆ ಹಣ ವಸೂಲಿ ಮಾಡುತ್ತಾರೆ. ಜನರು ಅನಿವಾರ್ಯವಾಗಿ ಕೇಳಿದಷ್ಟು ಹಣ ನೀಡಿ ಪ್ರಯಾಣಿಸಬೇಕಾಗಿದೆ. ಪೊಲೀಸ್ ಹಾಗೂ ಸಾರಿಗೆ ಇಲಾಖೆಯವರು ಆಟೋದವರಿಗೆ ಕಡ್ಡಾಯವಾಗಿ ಮೀಟರ್ ಹಾಕಿ ಅದರ ಪ್ರಕಾರವೇ ಬಾಡಿಗೆ ವಸೂಲಿ ಮಾಡಲು ಸೂಚನೆ ನೀಡಬೇಕು ಹಾಗೂ ಪ್ರಯಾಣಿಕರಿಂದ ಹೆಚ್ಚು ಹಣ ವಸೂಲಿ ಮಾಡುವ ಆಟೋ ಚಾಲಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
– ಸಂಗೀತಾ, ಮೈಸೂರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…