ಓದುಗರ ಪತ್ರ
ಮೈಸೂರು ದಸರಾ ಮಹೋತ್ಸವ ಆರಂಭವಾಗಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳ ಸಾವಿರಾರು ಜನರು ಪ್ರತಿನಿತ್ಯ ದಸರಾ ವೀಕ್ಷಣೆಗೆ ಮೈಸೂರಿಗೆ ಆಗಮಿಸುತ್ತಾರೆ. ನಗರದ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳಲು ಆಟೋಗಳನ್ನೇ ಅವಲಂಬಿಸಿ ದ್ದಾರೆ. ಆದರೆ ಇದನ್ನೇ ಬಂಡವಾಳವಾಗಿಸಿ ಕೊಂಡಿರುವ ಕೆಲವು ಆಟೋ ಚಾಲಕರು ಸಮೀಪದ ಸ್ಥಳಗಳಿಗೂ ೨೦೦ ರೂ. ಬಾಡಿಗೆ ಕೇಳುತ್ತಾರೆ. ಹೊರ ಊರಿನಿಂದ ಬಂದವರು ಅನಿವಾರ್ಯವಾಗಿ ಕೇಳಿದಷ್ಟು ಬಾಡಿಗೆ ನೀಡಿ ಸಂಚರಿಸುವಂತಾಗಿದೆ.
ಇದನ್ನೂ ಓದಿ :-ಕನ್ನಡದ ನೆಲದ ಕಾಡುವ ಕತೆ ಹೇಳುವ ‘ಕಹಾನಿ’
ಇನ್ನು ದಸರಾ ನಿಮಿತ್ತ ಪಂಜಿನ ಕವಾಯತು ನಡೆಯುವ ಬನ್ನಿಮಂಟಪದಲ್ಲಿರುವ ಕ್ರೀಡಾಂಗಣದಿಂದ ಕಾರ್ಯಕ್ರಮ ಮುಗಿದ ನಂತರ ಆಟೋ ಚಾಲಕರು ಮನಸೋ ಇಚ್ಛೆ ಹಣ ವಸೂಲಿ ಮಾಡುತ್ತಾರೆ. ಜನರು ಅನಿವಾರ್ಯವಾಗಿ ಕೇಳಿದಷ್ಟು ಹಣ ನೀಡಿ ಪ್ರಯಾಣಿಸಬೇಕಾಗಿದೆ. ಪೊಲೀಸ್ ಹಾಗೂ ಸಾರಿಗೆ ಇಲಾಖೆಯವರು ಆಟೋದವರಿಗೆ ಕಡ್ಡಾಯವಾಗಿ ಮೀಟರ್ ಹಾಕಿ ಅದರ ಪ್ರಕಾರವೇ ಬಾಡಿಗೆ ವಸೂಲಿ ಮಾಡಲು ಸೂಚನೆ ನೀಡಬೇಕು ಹಾಗೂ ಪ್ರಯಾಣಿಕರಿಂದ ಹೆಚ್ಚು ಹಣ ವಸೂಲಿ ಮಾಡುವ ಆಟೋ ಚಾಲಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
– ಸಂಗೀತಾ, ಮೈಸೂರು
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…