ಓದುಗರ ಪತ್ರ
ಮೈಸೂರಿನ ಶಿವರಾಮ್ ಪೇಟೆ ರಸ್ತೆಯಲ್ಲಿರುವ ನಂಜರಾಜ ಬಹದ್ದೂರ್ ಛತ್ರ ಹಾಗೂ ರಾಜ್ ಕಮಲ್ ಥಿಯೇಟರ್ ನಡುವೆ ಬರುವ ವೃತ್ತದಲ್ಲಿ ದಿನನಿತ್ಯ ಸಾಕಷ್ಟು ವಾಹನಗಳು ಸಂಚರಿಸುತ್ತವೆ, ಆದರೆ ಈ ಸರ್ಕಲ್ನಲ್ಲಿ ಕೆಲವು ಸಂದರ್ಭದಲ್ಲಿ ವಾಹನ ಚಾಲಕರು ಅಡ್ಡಾ ದಿಡ್ಡಿ ಚಾಲನೆ ಮಾಡುತ್ತಿದ್ದು, ಹಲವಾರಿ ಬಾರಿ ಅಪಘಾತಗಳು ಸಂಭವಿಸಿವೆ. ಯಾವುದೇ ವಾಹನ ಒಂದು ವೃತ್ತವನ್ನು ಬಳಸಿಕೊಂಡು ಹೋಗುವುದು ಒಂದು ನಿಯಮ, ಆದರೆ ಇಲ್ಲಿ ಅದು ತದ್ವಿರುದ್ಧವಾಗಿದೆ. ವಾಹನ ಸವಾರರು ವೃತ್ತವನ್ನು ಬಳಸದೆ ಸಂಚಾರ ನಿಯಮವನ್ನು ಉಲ್ಲಂಸುತ್ತಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಈ ಸರ್ಕಲ್ ಕೆ.ಆರ್.ಆಸ್ಪತ್ರೆ ಹತ್ತಿರದಲ್ಲೇ ಇರುವುದರಿಂದ ದಿನಕ್ಕೆ ಲೆಕ್ಕವಿಲ್ಲದಷ್ಟು ಆಂಬ್ಯುಲೆನ್ಸ್ ಗಳು ರೋಗಿಗಳನ್ನು ಕರೆದುಕೊಂಡು ಅದೇ ಮಾರ್ಗದಲ್ಲಿ ಹೋಗುತ್ತವೆ. ಈ ಸರ್ಕಲ್ನಲ್ಲಿ ಸಿಗ್ನಲ್ ವ್ಯವಸ್ಥೆ ಇದ್ದರೂ ಕೆಲವು ಸಂದರ್ಭದಲ್ಲಿ ಕಾರ್ಯನಿರ್ವಹಿಸುವುದಿಲ್ಲ. ಸಂಬಂಧಪಟ್ಟವರು ಕೂಡಲೇ ಅಡ್ಡಾದಿಡ್ಡಿ ವಾಹನ ಚಾಲನೆಗೆ ಕಡಿವಾಣ ಹಾಕಬೇಕಾಗಿದೆ.
-ಬಿ.ಎಸ್.ಸಾಯಿ ಸಂದೇಶ್, ಮೈಸೂರು
ಮಧ್ಯಪ್ರಾಚ್ಯ ಯುದ್ಧದ ಬಿಸಿಗೆ ನಲುಗಿದ ಮೈಸೂರು ಹೋಟೆಲ್ಗಳು ಸೌದೆ ಒಲೆಗೆ ಮೊರೆ ಹೋದ ನ್ಯೂ ಲಕ್ಷ್ಮಿ ಭವನ; ಅನಿಲದ ಹಂಗಿಲ್ಲದ…
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…