ಓದುಗರ ಪತ್ರ
ಮೈಸೂರಿನ ಶಿವರಾಮ್ ಪೇಟೆ ರಸ್ತೆಯಲ್ಲಿರುವ ನಂಜರಾಜ ಬಹದ್ದೂರ್ ಛತ್ರ ಹಾಗೂ ರಾಜ್ ಕಮಲ್ ಥಿಯೇಟರ್ ನಡುವೆ ಬರುವ ವೃತ್ತದಲ್ಲಿ ದಿನನಿತ್ಯ ಸಾಕಷ್ಟು ವಾಹನಗಳು ಸಂಚರಿಸುತ್ತವೆ, ಆದರೆ ಈ ಸರ್ಕಲ್ನಲ್ಲಿ ಕೆಲವು ಸಂದರ್ಭದಲ್ಲಿ ವಾಹನ ಚಾಲಕರು ಅಡ್ಡಾ ದಿಡ್ಡಿ ಚಾಲನೆ ಮಾಡುತ್ತಿದ್ದು, ಹಲವಾರಿ ಬಾರಿ ಅಪಘಾತಗಳು ಸಂಭವಿಸಿವೆ. ಯಾವುದೇ ವಾಹನ ಒಂದು ವೃತ್ತವನ್ನು ಬಳಸಿಕೊಂಡು ಹೋಗುವುದು ಒಂದು ನಿಯಮ, ಆದರೆ ಇಲ್ಲಿ ಅದು ತದ್ವಿರುದ್ಧವಾಗಿದೆ. ವಾಹನ ಸವಾರರು ವೃತ್ತವನ್ನು ಬಳಸದೆ ಸಂಚಾರ ನಿಯಮವನ್ನು ಉಲ್ಲಂಸುತ್ತಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಈ ಸರ್ಕಲ್ ಕೆ.ಆರ್.ಆಸ್ಪತ್ರೆ ಹತ್ತಿರದಲ್ಲೇ ಇರುವುದರಿಂದ ದಿನಕ್ಕೆ ಲೆಕ್ಕವಿಲ್ಲದಷ್ಟು ಆಂಬ್ಯುಲೆನ್ಸ್ ಗಳು ರೋಗಿಗಳನ್ನು ಕರೆದುಕೊಂಡು ಅದೇ ಮಾರ್ಗದಲ್ಲಿ ಹೋಗುತ್ತವೆ. ಈ ಸರ್ಕಲ್ನಲ್ಲಿ ಸಿಗ್ನಲ್ ವ್ಯವಸ್ಥೆ ಇದ್ದರೂ ಕೆಲವು ಸಂದರ್ಭದಲ್ಲಿ ಕಾರ್ಯನಿರ್ವಹಿಸುವುದಿಲ್ಲ. ಸಂಬಂಧಪಟ್ಟವರು ಕೂಡಲೇ ಅಡ್ಡಾದಿಡ್ಡಿ ವಾಹನ ಚಾಲನೆಗೆ ಕಡಿವಾಣ ಹಾಕಬೇಕಾಗಿದೆ.
-ಬಿ.ಎಸ್.ಸಾಯಿ ಸಂದೇಶ್, ಮೈಸೂರು
ಟೆಹರಾನ್: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ದಾಳಿ ಮುಂದುವರಿಸಿದ್ದು, ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ. ಇರಾನ್ನ ಬೀದಿ ಬೀದಿಗಳಲ್ಲಿ ಬೆಂಕಿ…
ಪಾಂಡವಪುರ: ಸ್ಯಾಂಡಲ್ವುಡ್ ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ಹಾಗೂ ಸಂಘಟಕ ನರಹಳ್ಳಿ ಜ್ಞಾನೇಶ್ (೪೮) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯನಿಮಿತ್ತ…
ಪಾಟ್ನಾ: ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ ನಿಶಾಂತ್ ಕುಮಾರ್ ಅವರಿಂದು ಪಾಟ್ನಾದ ಜೆಡಿಯು ಪಕ್ಷದ ಪ್ರಧಾನ ಕಚೇರಿಯಲ್ಲಿ ಜೆಡಿಯು…
ಬೆಂಗಳೂರು: ಇರಾನ್ ಮೇಲೆ ಇಸ್ರೇಲ್, ಅಮೇರಿಕಾ ದಾಳಿ ನಡೆಸುತ್ತಿರುವ ಪರಿಣಾಮ ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಹಿನ್ನೆಲೆಯಲ್ಲಿ ಅದರ ಬಿಸಿ ರಾಜಧಾನಿ ಬೆಂಗಳೂರಿಗೆ…
ನವದೆಹಲಿ: ಭಾರತಕ್ಕೆ ರಷ್ಯಾ ತೈಲ ಖರೀದಿಗೆ ಅನುಮತಿ ಕೊಟ್ಟಿದ್ದೇವೆ ಎಂದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಕಮಲ್ ಹಾಸನ್…
ನವದೆಹಲಿ: ಡಾರ್ಜಿಲಿಂಗ್ನಲ್ಲಿ ನಡೆದ 9ನೇ ಅಂತರಾಷ್ಟ್ರೀಯ ಸಂತಾಲ್ ಸಮ್ಮೇಳನದ ಸ್ಥಳ ಬದಲಾವಣೆ ಮತ್ತು ಸಂಬಂಧಿತ ವ್ಯವಸ್ಥೆಗಳು ಸೇರಿದಂತೆ ರಾಷ್ಟ್ರಪತಿ ದ್ರೌಪದಿ…