ಓದುಗರ ಪತ್ರ
ಮೈಸೂರಿನ ಶಿವರಾಮ್ ಪೇಟೆ ರಸ್ತೆಯಲ್ಲಿರುವ ನಂಜರಾಜ ಬಹದ್ದೂರ್ ಛತ್ರ ಹಾಗೂ ರಾಜ್ ಕಮಲ್ ಥಿಯೇಟರ್ ನಡುವೆ ಬರುವ ವೃತ್ತದಲ್ಲಿ ದಿನನಿತ್ಯ ಸಾಕಷ್ಟು ವಾಹನಗಳು ಸಂಚರಿಸುತ್ತವೆ, ಆದರೆ ಈ ಸರ್ಕಲ್ನಲ್ಲಿ ಕೆಲವು ಸಂದರ್ಭದಲ್ಲಿ ವಾಹನ ಚಾಲಕರು ಅಡ್ಡಾ ದಿಡ್ಡಿ ಚಾಲನೆ ಮಾಡುತ್ತಿದ್ದು, ಹಲವಾರಿ ಬಾರಿ ಅಪಘಾತಗಳು ಸಂಭವಿಸಿವೆ. ಯಾವುದೇ ವಾಹನ ಒಂದು ವೃತ್ತವನ್ನು ಬಳಸಿಕೊಂಡು ಹೋಗುವುದು ಒಂದು ನಿಯಮ, ಆದರೆ ಇಲ್ಲಿ ಅದು ತದ್ವಿರುದ್ಧವಾಗಿದೆ. ವಾಹನ ಸವಾರರು ವೃತ್ತವನ್ನು ಬಳಸದೆ ಸಂಚಾರ ನಿಯಮವನ್ನು ಉಲ್ಲಂಸುತ್ತಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಈ ಸರ್ಕಲ್ ಕೆ.ಆರ್.ಆಸ್ಪತ್ರೆ ಹತ್ತಿರದಲ್ಲೇ ಇರುವುದರಿಂದ ದಿನಕ್ಕೆ ಲೆಕ್ಕವಿಲ್ಲದಷ್ಟು ಆಂಬ್ಯುಲೆನ್ಸ್ ಗಳು ರೋಗಿಗಳನ್ನು ಕರೆದುಕೊಂಡು ಅದೇ ಮಾರ್ಗದಲ್ಲಿ ಹೋಗುತ್ತವೆ. ಈ ಸರ್ಕಲ್ನಲ್ಲಿ ಸಿಗ್ನಲ್ ವ್ಯವಸ್ಥೆ ಇದ್ದರೂ ಕೆಲವು ಸಂದರ್ಭದಲ್ಲಿ ಕಾರ್ಯನಿರ್ವಹಿಸುವುದಿಲ್ಲ. ಸಂಬಂಧಪಟ್ಟವರು ಕೂಡಲೇ ಅಡ್ಡಾದಿಡ್ಡಿ ವಾಹನ ಚಾಲನೆಗೆ ಕಡಿವಾಣ ಹಾಕಬೇಕಾಗಿದೆ.
-ಬಿ.ಎಸ್.ಸಾಯಿ ಸಂದೇಶ್, ಮೈಸೂರು
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…