ಓದುಗರ ಪತ್ರ
ಮೈಸೂರಿನ ಶಿವರಾಮ್ ಪೇಟೆ ರಸ್ತೆಯಲ್ಲಿರುವ ನಂಜರಾಜ ಬಹದ್ದೂರ್ ಛತ್ರ ಹಾಗೂ ರಾಜ್ ಕಮಲ್ ಥಿಯೇಟರ್ ನಡುವೆ ಬರುವ ವೃತ್ತದಲ್ಲಿ ದಿನನಿತ್ಯ ಸಾಕಷ್ಟು ವಾಹನಗಳು ಸಂಚರಿಸುತ್ತವೆ, ಆದರೆ ಈ ಸರ್ಕಲ್ನಲ್ಲಿ ಕೆಲವು ಸಂದರ್ಭದಲ್ಲಿ ವಾಹನ ಚಾಲಕರು ಅಡ್ಡಾ ದಿಡ್ಡಿ ಚಾಲನೆ ಮಾಡುತ್ತಿದ್ದು, ಹಲವಾರಿ ಬಾರಿ ಅಪಘಾತಗಳು ಸಂಭವಿಸಿವೆ. ಯಾವುದೇ ವಾಹನ ಒಂದು ವೃತ್ತವನ್ನು ಬಳಸಿಕೊಂಡು ಹೋಗುವುದು ಒಂದು ನಿಯಮ, ಆದರೆ ಇಲ್ಲಿ ಅದು ತದ್ವಿರುದ್ಧವಾಗಿದೆ. ವಾಹನ ಸವಾರರು ವೃತ್ತವನ್ನು ಬಳಸದೆ ಸಂಚಾರ ನಿಯಮವನ್ನು ಉಲ್ಲಂಸುತ್ತಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಈ ಸರ್ಕಲ್ ಕೆ.ಆರ್.ಆಸ್ಪತ್ರೆ ಹತ್ತಿರದಲ್ಲೇ ಇರುವುದರಿಂದ ದಿನಕ್ಕೆ ಲೆಕ್ಕವಿಲ್ಲದಷ್ಟು ಆಂಬ್ಯುಲೆನ್ಸ್ ಗಳು ರೋಗಿಗಳನ್ನು ಕರೆದುಕೊಂಡು ಅದೇ ಮಾರ್ಗದಲ್ಲಿ ಹೋಗುತ್ತವೆ. ಈ ಸರ್ಕಲ್ನಲ್ಲಿ ಸಿಗ್ನಲ್ ವ್ಯವಸ್ಥೆ ಇದ್ದರೂ ಕೆಲವು ಸಂದರ್ಭದಲ್ಲಿ ಕಾರ್ಯನಿರ್ವಹಿಸುವುದಿಲ್ಲ. ಸಂಬಂಧಪಟ್ಟವರು ಕೂಡಲೇ ಅಡ್ಡಾದಿಡ್ಡಿ ವಾಹನ ಚಾಲನೆಗೆ ಕಡಿವಾಣ ಹಾಕಬೇಕಾಗಿದೆ.
-ಬಿ.ಎಸ್.ಸಾಯಿ ಸಂದೇಶ್, ಮೈಸೂರು
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…