Andolana originals

ಓದುಗರ ಪತ್ರ: ಕೋಚಿಂಗ್ ದಂಧೆಗೆ ಕಡಿವಾಣ ಹಾಕಿ

ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ ಪರೀಕ್ಷೆಗಳ ಹೊರೆ ಹೇರುವ ಮೂಲಕ ಅವರ ಬಾಲ್ಯವನ್ನು ಕಸಿದುಕೊಳ್ಳಲಾಗುತ್ತಿದೆ.

ಸರ್ಕಾರವು ನಿಗದಿಪಡಿಸಿದ ಶಾಲಾ ಪಠ್ಯಪುಸ್ತಕಗಳನ್ನು ಕಡೆ ಗಣಿಸುವ ಖಾಸಗಿ ಶಿಕ್ಷಣ ಸಂಸ್ಥೆಗಳು ತಾವೇ ಖಾಸಗಿ ಏಜೆನ್ಸಿಯಿಂದ ಖರೀದಿಸಿದ ಪುಸ್ತಕಗಳನ್ನು ಸಾವಿರಾರು ರೂ. ನೀಡಿ ತೆಗೆದುಕೊಳ್ಳಬೇಕು ಎಂದು ಪೋಷಕರ ಮೇಲೆ ಒತ್ತಡ ಹೇರುತ್ತಿದ್ದು, ಶೈಕ್ಷಣಿಕ ವರ್ಷ ಆರಂಭವಾದರೆ ಶಾಲಾ ಶುಲ್ಕ, ಪಠ್ಯಪುಸ್ತಕ ಶುಲ್ಕ ಮತ್ತಿತರ ವೆಚ್ಚಗಳಿಗೆ ದುಡಿಮೆಯ ಹಣ ಸಾಲದೇ ಸಾಲಮಾಡುವ ಪರಿಸ್ಥಿತಿಯಿದೆ.

ಇದರೊಂದಿಗೆ ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ನೀಟ್ ತರಬೇತಿಯನ್ನೂ ಕಡ್ಡಾಯಗೊಳಿಸಿರುವುದರಿಂದ ಖಾಸಗಿ ಕೋಚಿಂಗ್ ಸೆಂಟರ್‌ಗಳಿಗೆ ದುಬಾರಿ ತರಬೇತಿ ಶುಲ್ಕ ಕಟ್ಟಲು ಪೋಷಕರು ಪರದಾಡಬೇಕಾಗಿದೆ.

ಕೋಚಿಂಗ್ ಮಾಫಿಯಾ ಮತ್ತು ಶೈಕ್ಷಣಿಕ ಅಸಮಾನತೆಯ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ವತಂತ್ರ ತನಿಖೆಯಾಗಬೇಕು. ಶಿಕ್ಷಣವು ಕೇವಲ ಕೋಚಿಂಗ್ ಪಡೆದವರ ಪಾಲಾಗದೆ, ಸರ್ಕಾರ ರೂಪಿಸಿರುವ ಶಾಲಾ ಪಠ್ಯಕ್ರಮದ ಆಧಾರದ ಮೇಲೆ ಎಲ್ಲರಿಗೂ ಸಮಾನವಾಗಿ ಸಿಗುವಂತಾಗಲು ಜಾಗತಿಕ ಒತ್ತಡ ನಿರ್ಮಾಣವಾಗಬೇಕು.

 – ಮಹದೇವ್ ಕೋಟೆ, ಬಹುಜನ ಚಳವಳಿ ಕಾರ್ಯಕರ್ತರು, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಾದರಿಯ ನಡೆ!

ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…

1 hour ago

ಓದುಗರ ಪತ್ರ: ಅರಮನೆ ಸುತ್ತಲಿನ ಪಾದಚಾರಿ ಮಾರ್ಗ ದುರಸ್ತಿ ಮಾಡಿ

ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…

1 hour ago

ಓದುಗರ ಪತ್ರ: ಕೆರೆಗಳಿಗೆ ಹೇಮಾವತಿ ಜಲಾಶಯದಿಂದ ನೀರು ತುಂಬಿಸಿ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…

1 hour ago

ಶುಶ್ರೂಷೆ ವೃತ್ತಿಗೆ ಮೆರುಗು ನೀಡಿದ ಫ್ಲಾರೆನ್ಸ್ ನೈಟಿಂಗೇಲ್

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…

5 hours ago

ಜನಮೆಚ್ಚುಗೆ ಗಳಿಸಿದ ರಾಜ್ಯಮಟ್ಟದ ಯಿಫಾ ಹಾಕಿ

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…

5 hours ago

ಮಾರುಕಟ್ಟೆ ಬಂದ್ ಭೀತಿ; ಹೊಗೆಸೊಪ್ಪು ತಂದ ರೈತರ ಪರದಾಟ

ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್‌ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…

5 hours ago