ಓದುಗರ ಪತ್ರ
ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ ಪರೀಕ್ಷೆಗಳ ಹೊರೆ ಹೇರುವ ಮೂಲಕ ಅವರ ಬಾಲ್ಯವನ್ನು ಕಸಿದುಕೊಳ್ಳಲಾಗುತ್ತಿದೆ.
ಸರ್ಕಾರವು ನಿಗದಿಪಡಿಸಿದ ಶಾಲಾ ಪಠ್ಯಪುಸ್ತಕಗಳನ್ನು ಕಡೆ ಗಣಿಸುವ ಖಾಸಗಿ ಶಿಕ್ಷಣ ಸಂಸ್ಥೆಗಳು ತಾವೇ ಖಾಸಗಿ ಏಜೆನ್ಸಿಯಿಂದ ಖರೀದಿಸಿದ ಪುಸ್ತಕಗಳನ್ನು ಸಾವಿರಾರು ರೂ. ನೀಡಿ ತೆಗೆದುಕೊಳ್ಳಬೇಕು ಎಂದು ಪೋಷಕರ ಮೇಲೆ ಒತ್ತಡ ಹೇರುತ್ತಿದ್ದು, ಶೈಕ್ಷಣಿಕ ವರ್ಷ ಆರಂಭವಾದರೆ ಶಾಲಾ ಶುಲ್ಕ, ಪಠ್ಯಪುಸ್ತಕ ಶುಲ್ಕ ಮತ್ತಿತರ ವೆಚ್ಚಗಳಿಗೆ ದುಡಿಮೆಯ ಹಣ ಸಾಲದೇ ಸಾಲಮಾಡುವ ಪರಿಸ್ಥಿತಿಯಿದೆ.
ಇದರೊಂದಿಗೆ ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ನೀಟ್ ತರಬೇತಿಯನ್ನೂ ಕಡ್ಡಾಯಗೊಳಿಸಿರುವುದರಿಂದ ಖಾಸಗಿ ಕೋಚಿಂಗ್ ಸೆಂಟರ್ಗಳಿಗೆ ದುಬಾರಿ ತರಬೇತಿ ಶುಲ್ಕ ಕಟ್ಟಲು ಪೋಷಕರು ಪರದಾಡಬೇಕಾಗಿದೆ.
ಕೋಚಿಂಗ್ ಮಾಫಿಯಾ ಮತ್ತು ಶೈಕ್ಷಣಿಕ ಅಸಮಾನತೆಯ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ವತಂತ್ರ ತನಿಖೆಯಾಗಬೇಕು. ಶಿಕ್ಷಣವು ಕೇವಲ ಕೋಚಿಂಗ್ ಪಡೆದವರ ಪಾಲಾಗದೆ, ಸರ್ಕಾರ ರೂಪಿಸಿರುವ ಶಾಲಾ ಪಠ್ಯಕ್ರಮದ ಆಧಾರದ ಮೇಲೆ ಎಲ್ಲರಿಗೂ ಸಮಾನವಾಗಿ ಸಿಗುವಂತಾಗಲು ಜಾಗತಿಕ ಒತ್ತಡ ನಿರ್ಮಾಣವಾಗಬೇಕು.
– ಮಹದೇವ್ ಕೋಟೆ, ಬಹುಜನ ಚಳವಳಿ ಕಾರ್ಯಕರ್ತರು, ಮೈಸೂರು
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…