Andolana originals

ಓದುಗರ ಪತ್ರ: ಖಾಸಗಿ ಶಾಲೆಗಳ ಹೆಚ್ಚುವರಿ ಶುಲ್ಕ ವಸೂಲಿಗೆ ಕಡಿವಾಣ ಹಾಕಿ

ನೆರೆಯ ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ರವರು, ರಾಜ್ಯದ ಎಲ್ಲ ಖಾಸಗಿ ಶಾಲೆಗಳ ಪ್ರವೇಶಕ್ಕಾಗಿ ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಶಾಲೆಯ ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕು ಮತ್ತು ಹೆಚ್ಚಿನ ಶುಲ್ಕವನ್ನು ಪಡೆಯಬಾರದು ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಹೆಚ್ಚಿನ ಶುಲ್ಕವನ್ನು ಪಡೆದರೆ ಆ ಶಾಲೆಯ ಮಾನ್ಯತೆಯನ್ನು ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಪೋಷಕರಿಂದ ಗುಪ್ತ ಪ್ರವೇಶ ಶುಲ್ಕವನ್ನು (ರಸೀದಿ ನೀಡದೇ ವಸೂಲಿ ಮಾಡುವ ಹಣ), ಬಲವಂತವಾಗಿ ವಸೂಲು ಮಾಡದಂತೆ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಪೋಷಕರಿಂದ ದೂರು ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳೇ ಹೇಳಿದ್ದಾರೆ .

ನಮ್ಮ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿಸುವ ಡಿ.ಕೆ. ಶಿವಕುಮಾರ್‌ರವರು ನಮ್ಮ ರಾಜ್ಯದಲ್ಲೂ ಇಂತಹ ಕಟ್ಟುನಿಟ್ಟಿನ ಆದೇಶ ಜಾರಿಗೊಳಿಸುವ ಮೂಲಕ ಖಾಸಗಿ ಶಾಲೆಗಳಿಂದ ಹೆಚ್ಚುವರಿ ಶುಲ್ಕ ವಸೂಲಿಗೆ ಕಡಿವಾಣ ಹಾಕುವುದು ಅಗತ್ಯ.

-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

6 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

6 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

6 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

7 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

7 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

7 hours ago