ಓದುಗರ ಪತ್ರ
ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಆರಂಭಗೊಂಡಿದ್ದು, ಎಲ್ಲೆಡೆ ಬೆಟ್ಟಿಂಗ್ ಭರಾಟೆ ಜೋರಾಗಿದೆ. ಬಹುಬೇಗ ಹಣ ಗಳಿಸಬಹುದು ಎಂಬ ಉದ್ದೇಶದಿಂದ ಕೆಲ ಯುವ ಜನರು ಆನ್ಲೈನ್ ಮೂಲಕ ಬೆಟ್ಟಿಂಗ್ ಕಟ್ಟುತ್ತಾರೆ. ಇನ್ನು ಕೆಲವರು ಬುಕ್ಕಿಗಳ ಮೂಲಕ ಹಣ ಕಟ್ಟಿ ಬೆಟ್ಟಿಂಗ್ ಆಡುತ್ತಿದ್ದಾರೆ. ಕೆಲ ಬುಕ್ಕಿಗಳು ಗ್ರಾಮೀಣ ಪ್ರದೇಶದ ಕಾಲೇಜು ವಿದ್ಯಾರ್ಥಿಗಳು, ಯುವಕರನ್ನು ಗುರಿ ಯಾಗಿಸಿಕೊಂಡು ಬೆಟ್ಟಿಂಗ್ ಕಟ್ಟಿಸಿ ಕೊಂಡು ಅವರಿಗೆ ಮೋಸ ಮಾಡುತ್ತಿದ್ದಾರೆ. ಹೆಚ್ಚಿನ ವಿದ್ಯಾರ್ಥಿಗಳು ಬೆಟ್ಟಿಂಗ್ ಜಾಲಕ್ಕೆ ಸಿಲುಕುತ್ತಿರುವುದು ಆತಂಕಕಾರಿಯಾಗಿದೆ. ಯುವಕರು ಬೆಟ್ಟಿಂಗ್ ಕಟ್ಟುವ ಸಲುವಾಗಿ ಸಾಲ ಮಾಡುವುದು, ಮನೆಯಲ್ಲಿಯೇ ಕಳ್ಳತನ ಮಾಡುವುದಕ್ಕೆ ಮುಂದಾಗಿದ್ದಾರೆ. ಈ ಬಗ್ಗೆ ಪೋಷಕರು ಮಕ್ಕಳ ಮೇಲೆ ಕಣ್ಣಿಟ್ಟಿರಬೇಕು. ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು ಟಿವಿ ಮುಂದೆ ಕೂತು ಕ್ರಿಕೆಟ್ ವೀಕ್ಷಿಸುವುದನ್ನು ತಪ್ಪಿಸಬೇಕು. ಮಕ್ಕಳು ಹಾದಿ ತಪ್ಪುವ ಸುಳಿವು ಸಿಗುತ್ತಿದಂತೆಯೇ ಅವರನ್ನು ಸರಿದಾರಿಗೆ ತರುವ ಪ್ರಯತ್ನ ಮಾಡಬೇಕು. ಇತ್ತೀಚೆಗೆ ಬಡ ವಿದ್ಯಾರ್ಥಿಗಳು, ಮಧ್ಯಮ ವರ್ಗದ ಯುವಕರು ತಾವು ದುಡಿದ ಹಣವನ್ನೆಲ್ಲ ಬೆಟ್ಟಿಂಗ್ ಕಟ್ಟಿ ಹಣ ಕಳೆದುಕೊಂಡು, ಸಾಲದ ಸುಳಿಗೆ ಸಿಲುಕಿ ಕೊನೆಗೆ ಆತ್ಮಹತ್ಯೆಯ ಹಾದಿ ಹಿಡಿಯುವುದು ಮಾಮೂಲಿಯಾಗಿದೆ. ಇನ್ನು ಕೆಲವರು ಮನೆಯಲ್ಲಿದ್ದ ಚಿನ್ನಾಭರಣ, ಆಸ್ತಿಪಾಸ್ತಿಗಳನ್ನು ಅಡವಿಟ್ಟು ಬೆಟ್ಟಿಂಗ್ ಆಡುತ್ತಿದ್ದಾರೆ. ಈ ಬೆಟ್ಟಿಂಗ್ ಪ್ರಕ್ರಿಯೆಗಳು ಫೋನ್ ಮೂಲಕವೇ ನಡೆಯುತ್ತಿದ್ದು, ಸೈಬರ್ ಠಾಣಾ ಪೊಲೀಸರು ಈ ಬಗ್ಗೆ ಗಮನಹರಿಸಿ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಬೇಕಿದೆ.
-ಎನ್.ಪಿ.ಪರಶಿವಮೂರ್ತಿ, ಶಿಕ್ಷಕರು, ನಂಜೀಪುರ, ಸರಗೂರು ತಾ.
ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…
ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಬಿಹಾರದಿಂದ…
ಬೆಂಗಳೂರು: ಅಮೇರಿಕಾ, ಇಸ್ರೇಲ್-ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…
ಟೆಹರಾನ್: ಅಮೇರಿಕಾ ಹಾಗೂ ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…