Andolana originals

ಓದುಗರ ಪತ್ರ: ಐಪಿಎಲ್ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಿ

ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಆರಂಭಗೊಂಡಿದ್ದು, ಎಲ್ಲೆಡೆ ಬೆಟ್ಟಿಂಗ್ ಭರಾಟೆ ಜೋರಾಗಿದೆ. ಬಹುಬೇಗ ಹಣ ಗಳಿಸಬಹುದು ಎಂಬ ಉದ್ದೇಶದಿಂದ ಕೆಲ ಯುವ ಜನರು ಆನ್‌ಲೈನ್ ಮೂಲಕ ಬೆಟ್ಟಿಂಗ್ ಕಟ್ಟುತ್ತಾರೆ. ಇನ್ನು ಕೆಲವರು ಬುಕ್ಕಿಗಳ ಮೂಲಕ ಹಣ ಕಟ್ಟಿ ಬೆಟ್ಟಿಂಗ್ ಆಡುತ್ತಿದ್ದಾರೆ. ಕೆಲ ಬುಕ್ಕಿಗಳು ಗ್ರಾಮೀಣ ಪ್ರದೇಶದ ಕಾಲೇಜು ವಿದ್ಯಾರ್ಥಿಗಳು, ಯುವಕರನ್ನು ಗುರಿ ಯಾಗಿಸಿಕೊಂಡು ಬೆಟ್ಟಿಂಗ್ ಕಟ್ಟಿಸಿ ಕೊಂಡು ಅವರಿಗೆ ಮೋಸ ಮಾಡುತ್ತಿದ್ದಾರೆ. ಹೆಚ್ಚಿನ ವಿದ್ಯಾರ್ಥಿಗಳು ಬೆಟ್ಟಿಂಗ್ ಜಾಲಕ್ಕೆ ಸಿಲುಕುತ್ತಿರುವುದು ಆತಂಕಕಾರಿಯಾಗಿದೆ. ಯುವಕರು ಬೆಟ್ಟಿಂಗ್ ಕಟ್ಟುವ ಸಲುವಾಗಿ ಸಾಲ ಮಾಡುವುದು, ಮನೆಯಲ್ಲಿಯೇ ಕಳ್ಳತನ ಮಾಡುವುದಕ್ಕೆ ಮುಂದಾಗಿದ್ದಾರೆ. ಈ ಬಗ್ಗೆ ಪೋಷಕರು ಮಕ್ಕಳ ಮೇಲೆ ಕಣ್ಣಿಟ್ಟಿರಬೇಕು. ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು ಟಿವಿ ಮುಂದೆ ಕೂತು ಕ್ರಿಕೆಟ್ ವೀಕ್ಷಿಸುವುದನ್ನು ತಪ್ಪಿಸಬೇಕು. ಮಕ್ಕಳು ಹಾದಿ ತಪ್ಪುವ ಸುಳಿವು ಸಿಗುತ್ತಿದಂತೆಯೇ ಅವರನ್ನು ಸರಿದಾರಿಗೆ ತರುವ ಪ್ರಯತ್ನ ಮಾಡಬೇಕು. ಇತ್ತೀಚೆಗೆ ಬಡ ವಿದ್ಯಾರ್ಥಿಗಳು, ಮಧ್ಯಮ ವರ್ಗದ ಯುವಕರು ತಾವು ದುಡಿದ ಹಣವನ್ನೆಲ್ಲ ಬೆಟ್ಟಿಂಗ್ ಕಟ್ಟಿ ಹಣ ಕಳೆದುಕೊಂಡು, ಸಾಲದ ಸುಳಿಗೆ ಸಿಲುಕಿ ಕೊನೆಗೆ ಆತ್ಮಹತ್ಯೆಯ ಹಾದಿ ಹಿಡಿಯುವುದು ಮಾಮೂಲಿಯಾಗಿದೆ. ಇನ್ನು ಕೆಲವರು ಮನೆಯಲ್ಲಿದ್ದ ಚಿನ್ನಾಭರಣ, ಆಸ್ತಿಪಾಸ್ತಿಗಳನ್ನು ಅಡವಿಟ್ಟು ಬೆಟ್ಟಿಂಗ್ ಆಡುತ್ತಿದ್ದಾರೆ. ಈ ಬೆಟ್ಟಿಂಗ್ ಪ್ರಕ್ರಿಯೆಗಳು ಫೋನ್ ಮೂಲಕವೇ ನಡೆಯುತ್ತಿದ್ದು, ಸೈಬರ್ ಠಾಣಾ ಪೊಲೀಸರು ಈ ಬಗ್ಗೆ ಗಮನಹರಿಸಿ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಬೇಕಿದೆ.

 -ಎನ್.ಪಿ.ಪರಶಿವಮೂರ್ತಿ, ಶಿಕ್ಷಕರು, ನಂಜೀಪುರ, ಸರಗೂರು ತಾ.

ಆಂದೋಲನ ಡೆಸ್ಕ್

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

2 hours ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

3 hours ago

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

14 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

15 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

16 hours ago