ಓದುಗರ ಪತ್ರ
ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಆರಂಭಗೊಂಡಿದ್ದು, ಎಲ್ಲೆಡೆ ಬೆಟ್ಟಿಂಗ್ ಭರಾಟೆ ಜೋರಾಗಿದೆ. ಬಹುಬೇಗ ಹಣ ಗಳಿಸಬಹುದು ಎಂಬ ಉದ್ದೇಶದಿಂದ ಕೆಲ ಯುವ ಜನರು ಆನ್ಲೈನ್ ಮೂಲಕ ಬೆಟ್ಟಿಂಗ್ ಕಟ್ಟುತ್ತಾರೆ. ಇನ್ನು ಕೆಲವರು ಬುಕ್ಕಿಗಳ ಮೂಲಕ ಹಣ ಕಟ್ಟಿ ಬೆಟ್ಟಿಂಗ್ ಆಡುತ್ತಿದ್ದಾರೆ. ಕೆಲ ಬುಕ್ಕಿಗಳು ಗ್ರಾಮೀಣ ಪ್ರದೇಶದ ಕಾಲೇಜು ವಿದ್ಯಾರ್ಥಿಗಳು, ಯುವಕರನ್ನು ಗುರಿ ಯಾಗಿಸಿಕೊಂಡು ಬೆಟ್ಟಿಂಗ್ ಕಟ್ಟಿಸಿ ಕೊಂಡು ಅವರಿಗೆ ಮೋಸ ಮಾಡುತ್ತಿದ್ದಾರೆ. ಹೆಚ್ಚಿನ ವಿದ್ಯಾರ್ಥಿಗಳು ಬೆಟ್ಟಿಂಗ್ ಜಾಲಕ್ಕೆ ಸಿಲುಕುತ್ತಿರುವುದು ಆತಂಕಕಾರಿಯಾಗಿದೆ. ಯುವಕರು ಬೆಟ್ಟಿಂಗ್ ಕಟ್ಟುವ ಸಲುವಾಗಿ ಸಾಲ ಮಾಡುವುದು, ಮನೆಯಲ್ಲಿಯೇ ಕಳ್ಳತನ ಮಾಡುವುದಕ್ಕೆ ಮುಂದಾಗಿದ್ದಾರೆ. ಈ ಬಗ್ಗೆ ಪೋಷಕರು ಮಕ್ಕಳ ಮೇಲೆ ಕಣ್ಣಿಟ್ಟಿರಬೇಕು. ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು ಟಿವಿ ಮುಂದೆ ಕೂತು ಕ್ರಿಕೆಟ್ ವೀಕ್ಷಿಸುವುದನ್ನು ತಪ್ಪಿಸಬೇಕು. ಮಕ್ಕಳು ಹಾದಿ ತಪ್ಪುವ ಸುಳಿವು ಸಿಗುತ್ತಿದಂತೆಯೇ ಅವರನ್ನು ಸರಿದಾರಿಗೆ ತರುವ ಪ್ರಯತ್ನ ಮಾಡಬೇಕು. ಇತ್ತೀಚೆಗೆ ಬಡ ವಿದ್ಯಾರ್ಥಿಗಳು, ಮಧ್ಯಮ ವರ್ಗದ ಯುವಕರು ತಾವು ದುಡಿದ ಹಣವನ್ನೆಲ್ಲ ಬೆಟ್ಟಿಂಗ್ ಕಟ್ಟಿ ಹಣ ಕಳೆದುಕೊಂಡು, ಸಾಲದ ಸುಳಿಗೆ ಸಿಲುಕಿ ಕೊನೆಗೆ ಆತ್ಮಹತ್ಯೆಯ ಹಾದಿ ಹಿಡಿಯುವುದು ಮಾಮೂಲಿಯಾಗಿದೆ. ಇನ್ನು ಕೆಲವರು ಮನೆಯಲ್ಲಿದ್ದ ಚಿನ್ನಾಭರಣ, ಆಸ್ತಿಪಾಸ್ತಿಗಳನ್ನು ಅಡವಿಟ್ಟು ಬೆಟ್ಟಿಂಗ್ ಆಡುತ್ತಿದ್ದಾರೆ. ಈ ಬೆಟ್ಟಿಂಗ್ ಪ್ರಕ್ರಿಯೆಗಳು ಫೋನ್ ಮೂಲಕವೇ ನಡೆಯುತ್ತಿದ್ದು, ಸೈಬರ್ ಠಾಣಾ ಪೊಲೀಸರು ಈ ಬಗ್ಗೆ ಗಮನಹರಿಸಿ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಬೇಕಿದೆ.
-ಎನ್.ಪಿ.ಪರಶಿವಮೂರ್ತಿ, ಶಿಕ್ಷಕರು, ನಂಜೀಪುರ, ಸರಗೂರು ತಾ.
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ ಆಲ್ಬರ್ಟ್ ಐನ್ಸ್ಟೀನ್ ಗಾಂಧೀಜಿಯವರನ್ನು ಕುರಿತು ಬರೆಯುತ್ತಾ, ‘ಗಾಂಧಿ…
ಮಂಡ್ಯ : ಇತ್ತೀಚೆಗೆ ಕೆ.ಆರ್.ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ (ಸ್ಕ್ಯಾನಿಂಗ್) ಸೆಂಟರ್ಗಳಲ್ಲಿ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದನ್ನು ಲೋಕಾಯುಕ್ತ…
ಜನಪ್ರತಿನಿಧಿಗಳ ಆಡಳಿತವಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ಅಂಧ ದರ್ಬಾರ್ ಮೈಸೂರು : ಗ್ಯಾಸ್ ದರ ಹೆಚ್ಚಳ..., ವಿದ್ಯುತ್ ದರ ಹೆಚ್ಚಳ..., ನೀರಿನ…
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…